ಬೆಳಾಲು: ಮೈತ್ರಿ ಯುವಕ ಮಂಡಲ ಇದರ ನೂತನ ಪದಾಧಿಕಾರಿಗಳ ಆಯ್ಕೆ

0

ಬೆಳಾಲು: ಮೈತ್ರಿ ಯುವಕ ಮಂಡಲ ಬೆಳಾಲು ಇದರ ಮುಂದಿನ ಎರಡು ವರ್ಷದ ಅವಧಿಗೆ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸಂಘದ ಸಭಾಂಗಣದಲ್ಲಿ ಗೌರವಾಧ್ಯಕ್ಷರಾದ ಪ್ರವೀಣ್ ವಿಜಯ್, ಅಧ್ಯಕ್ಷರಾದ ರಾಜೇಶ್ ಪಾರಳ, ಕಾರ್ಯದರ್ಶಿ ಮಹಮ್ಮದ್ ಆದರ್ಶನಗರ ಹಾಗೂ ಗೌರವ ಸಲಹೆಗಾರ ಶ್ರೀನಿವಾಸ್ ಗೌಡ ನೋಟರಿ ವಕೀಲರು, ಹಾಗೂ ಸಂಘದ ಸರ್ವ ಸದಸ್ಯರ ಸಮ್ಮುಖದಲ್ಲಿ ನಡೆಯಿತು.

ನೂತನ ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್ ಮುಂಡೆತ್ಯಾರ್, ಉಪಾಧ್ಯಕ್ಷರಾಗಿ ಆಸೀಫ್ ಮುಂಡೆತ್ಯಾರ್, ಜತೆ ಕಾರ್ಯದರ್ಶಿಯಾಗಿ ನವನೀತ್ ಗೌಡ ಮತ್ತು ಕೋಶಾಧಿಕಾರಿಯಾಗಿ ಕಿರಣ್ ಈರೆಂತ್ಯಾರ್, ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ರಾಧೇಶ್ ಆದರ್ಶನಗರ, ಕೇಶವ ಆದರ್ಶ ನಗರ, ಸುರೇಶ್ ಇಂದಲ್ಕೆ, ಶಾಹಿದ್ ಆದರ್ಶ ನಗರ, ಮಹಮ್ಮದ್ ಆದರ್ಶ ನಗರ, ಯತಿರಾಜ್ ಮೊಕ್ಕರ್ಜಾಲ್ ಇವರು ಅವಿರೋಧವಾಗಿ ಆಯ್ಕೆಯಾದರು.ಗೌರವಾಧ್ಯಕ್ಷರಾಗಿ ರಾಜೇಶ್ ಪಾರಳ ಇವರನ್ನು ನೇಮಿಸಲಾಯಿತು.

LEAVE A REPLY

Please enter your comment!
Please enter your name here