Site icon Suddi Belthangady

ಕಾಶಿಪಟ್ಟ ಗ್ರಾ.ಪಂ ಗೆ ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ರಾಜ್ಯಮಟ್ಟದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023 ಸಮೀಕ್ಷೆಯಲ್ಲಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕಾಶಿಪಟ್ಟ ಗ್ರಾಮ ಪಂಚಾಯತು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕೀರ್ತಿಗೆ ಪಾತ್ರವಾಗಿದೆ.

ಅ.2ರಂದು ಬೆಂಗಳೂರಿನ ವಿಧಾನ ಸೌಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಉಪಸ್ಥಿತಿಯಲ್ಲಿ ನಡೆದ “ಗಾಂಧೀ ಗ್ರಾಮ ಪುರಸ್ಕಾರ” ಸಮಾರಂಭದಲ್ಲಿ ಕಾಶಿಪಟ್ಟ ಗ್ರಾ.ಪಂ ಅಧ್ಯಕ್ಷ ಸತೀಶ್ ಕೆ.ಬಂಗೇರ ಹಾಗೂ ಪಿಡಿಒ ಆಶಾಲತಾ ಅವರು ‘ಸ್ವಚ್ಛ ಸರ್ವೇಕ್ಷಣ ಗ್ರಾಮೀಣ-2023’ ಪ್ರಶಸ್ತಿಯನ್ನು ಪಡೆದುಕೊಂಡರು.

Exit mobile version