ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿಯಿಂದ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ತಾಲೂಕು ಆಡಳಿತ ಸೌಧದ ಮುಂಭಾಗದಲ್ಲಿ ಪ್ರತಿಭಟನೆ- ತಹಶೀಲ್ದಾರರಿಗೆ ಮನವಿ

0

ಬೆಳ್ತಂಗಡಿ: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಬೆಳ್ತಂಗಡಿ ತಹಶೀಲ್ದಾರರ ಕಚೇರಿಯ ಎದುರು ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸೌಲಭ್ಯಗಳನ್ನು ಕಡಿತ ಮಾಡುವ‌ ನಿರ್ಧಾರವನ್ನು ಕೈಬಿಡಬೇಕು‌ ಹಾಗೂ ಕಾರ್ಮಿಕರ ವಿವಿದ ಸಮಸ್ಯೆಗಳನ್ನು ಬಗೆಹರಿಸುವಂತೆ ಪ್ರತಿಭಟಿಸಲಾಯಿತು.

ಪ್ರತಿಭಟನೆ ಕಾರ್ಯಕ್ರಮವನ್ನು ಉದ್ದೇಶಿಸಿ ಬಿಎಂಎಸ್ ನ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲಿಯಾನ್ ಮಾತನಾಡುತ್ತಾ ಪ್ರಸ್ತುತ ಕರ್ನಾಟಕ ಸರ್ಕಾರದ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯು ಕಟ್ಟಡ ಕಾರ್ಮಿಕರಿಗೆ ಸಿಗುವ ಹಲವು ಸೌಲಭ್ಯಗಳನ್ನು ಕಡಿತ ಮಾಡುವ ಬಗ್ಗೆ ಯೋಜಿಸಿದೆ.ಇದನ್ನು ಭಾರತೀಯ ಮಜ್ದೂರ್ ಸಂಘ ದ ಕಟ್ಟಡ ಕಾರ್ಮಿಕ ಸಂಘಗಳಿಂದ ರಾಜ್ಯದಾದ್ಯಂತ ಇಂದು ಪ್ರತಿಭಟಿಸಲಾಗುತ್ತಿದೆ. ತಕ್ಷಣ ಕಡಿತ ಮಾಡುವ ನಿರ್ದಾರವನ್ನು ಹಿಂಪಡೆಯುವಂತೆ ಅವರು ಅಗ್ರಹಿಸಿದರು.ಮತ್ತು 2021 ಸಾಲಿನ ಬಾಕಿಯಾಗಿರುವ 1 ಲಕ್ಷ ಕಟ್ಟಡ ಕಾರ್ಮಿಕರ ಸ್ಕಾಲರ್ ಶಿಪ್ ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು, 2022 23ನೇ ಸಾಲಿನ ಸ್ಕಾಲರ್ ಶಿಪ್ ಗಳ ಶೀಘ್ರ ಕಾರ್ಮಿಕರಿಗೆ ಪಾವತಿಸಬೇಕು ಮತ್ತು ಕಾರ್ಮಿಕರ ಆಸ್ಪತ್ರೆ ಚಿಕಿತ್ಸಾ ವೆಚ್ಚದ ಸರಿಯಾದ ಮರುಪಾವತಿಗೂ ಅವರು ಆಗ್ರಹಿಸಿದರು.‌ಮಂಡಳಿಯಲ್ಲಿ ಅನಾವಶ್ಯಕ ಟೆಂಡರ್ ಕರೆದು ಮಂಡಳಿಯ ಹಣ ಪೋಲು ಮಾಡುವ ಯೋಜನೆ ಜಾರಿಗೆ ತರದೇ ಕಾರ್ಮಿಕರಿಗೆ ಅವಶ್ಯಕ ವಸತಿ ಯೋಜನೆ ಹಾಗೂ ಸಾಮಾಜಿಕ ಭದ್ರತಾ  ಯೋಜನೆಗಳನ್ನು ಜಾರಿ ತರಬೇಕೆಂದು ಅವರು ಆಗ್ರಹಿಸಿದರು.

ಪ್ರತಿಭಟನೆಗೆ ಭಾಗವಹಿಸಿದ ಗಣ್ಯರನ್ನು ಮತ್ತು ಕಾರ್ಮಿಕ ಬಂಧುಗಳನ್ನು ತಾಲೂಕು ಬಿಎಂಎಸ್ ಅಧ್ಯಕ್ಷರಾದ ಉದಯ ಬಿ. ಕೆ ಸ್ವಾಗತಿಸಿ, ಪ್ರಸ್ತಾವನೆ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲೆಯ ಬಿಎಂಎಸ್ ಅಧ್ಯಕ್ಷರಾದ  ಅನಿಲ್ ಕುಮಾರ್  ಯು ಇವರು ಕಾರ್ಮಿಕರ ಸಮಸ್ಯೆಗಳನ್ನು ಕೂಡಲೆ ಪರಿಹರಿಸಿ.ಇಲ್ಲದಿದ್ದರೆಮುಂದಿನ ದಿನಗಳಲ್ಲಿ ಸಾವಿರಾರು ಕಾರ್ಮಿಕರನ್ನು ಒಗ್ಗೂಡಿಸಿ ಜಿಲ್ಲೆ ಮತ್ತು ರಾಜ್ಯದಲ್ಲಿ ಪ್ರತಿಭಟನೆಯನ್ನು ಮಾಡುತ್ತೇವೆ ಎಂದು  ನುಡಿದರು. ಉದಯ ಬಿ.ಕೆ ದನ್ಯವಾದ ಸಮರ್ಪಿಸಿದರು.

ಈ ಪ್ರತಿಭಟನೆ ಕಾರ್ಯಕ್ರಮದಲ್ಲಿ  ಜಿಲ್ಲಾ ಕಟ್ಟಡ ಕಾರ್ಮಿಕ ನಿರ್ಮಾಣ ಸಂಘದ  ಉಪಾಧ್ಯಕ್ಷರು ಗಣೇಶ್ ಪೂಜಾರಿ ಪೆರಾಡಿ, ಬಿಎಂಎಸ್ ಸಂಘದ ಮೂಡಬಿದ್ರೆ ಪ್ರಭಾರಿ ಪ್ರಮೋದ್ ರಾಜ್ ಪೆರಾಡಿ, ಬಿಎಂಎಸ್ ಬೆಳ್ತಂಗಡಿ ‌ತಾಲೂಕು ಸಂಯೋಜಕರಾದ ಸಾಂತಪ್ಪ ಕಲ್ಮಂಜ ಹಾಗೂ ಗ್ರಾಮ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿಗಳು, ತಾಲೂಕು ಸಮಿತಿಯ ಪದಾಧಿಕಾರಿಗಳು, ಕಾರ್ಮಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here