ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆಯಿಂದ ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಅನುದಾನ ವಿತರಣೆ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯಲ್ಲಿನ ಮಡಂತ್ಯಾರ್ ವಲಯದ ಮಾರಿಕಾಂಬಾ ನಗರ, ಪಾರೆಂಕಿ ಗ್ರಾಮದ ಶ್ರೀ ಮಾರಿಕಾಂಬಾದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಲಾದ ರೂ.ಒಂದು ಲಕ್ಷ ಅನುದಾನದ ಡಿ.ಡಿ.ಯನ್ನು ಗುರುವಾಯನಕೆರೆ ಯೋಜನಾ ಕಛೇರಿಯ ಯೋಜನಾಧಿಕಾರಿ ದಯಾನಂದ ಪೂಜಾರಿ ಮತ್ತು ಬೆಳ್ತಂಗಡಿ ಯೋಜನಾ ಕಛೇರಿಯ ತಾಲೂಕಿನ ಯೋಜನಾಧಿಕಾರಿ ಸುರೆಂದ್ರ ಇವರು ದೇವಸ್ಥಾನ ಸಮಿತಿಯವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ್ ರಾವ್, ಡಾ|ಕೆ.ಎಸ್ ಬಲ್ಲಾಳ್, ಕಾಂತಪ್ಪ ಗೌಡ, ಗ್ರಾ.ಪಂ.ಸದಸ್ಯ ಕಿಶೋರ್ ಶೆಟ್ಟಿ, ಪಾರೆಂಕಿ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಹೆಗ್ಡೆ, ಯೋಗೀಶ್ ಹೆಗ್ಡೆ ವಲಯ ಮೇಲ್ವಿಚಾರಕ ವಸಂತ ಕುಮಾರ್, ಪಾರೆಂಕಿ ಗ್ರಾಮದ ಸೇವಾಪ್ರತಿನಿಧಿಗಳು ಲೀಲಾವತಿ, ಹರಿಣಾಕ್ಷಿ, ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here