Site icon Suddi Belthangady

ನೆರಿಯ ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯ ವೇಳೆ ಪಕ್ಷದ ಆದೇಶ ಉಲ್ಲಂಘನೆ-ಗ್ರಾ.ಪಂ ಅಧ್ಯಕ್ಷೆ ವಸಂತಿ, ಸದಸ್ಯರಾದ ಕುಶಾಲ, ಸಚಿನ್ ಬಿಜೆಪಿ ಜವಾಬ್ದಾರಿಯಿಂದ ಮುಕ್ತ- ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್ ಆದೇಶ

ಬೆಳ್ತಂಗಡಿ: ನೆರಿಯ ಗ್ರಾಮ ಪಂಚಾಯತ್‌ನ ದ್ವಿತೀಯ ಅವಧಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯ ಚುನಾವಣೆಯಲ್ಲಿ ಪಕ್ಷದ ಆದೇಶ ಉಲ್ಲಂಘಿಸಿದ ಆರೋಪದಡಿ ಬೆಳ್ತಂಗಡಿ ಮಂಡಲ ಬಿಜೆಪಿ ಅಧ್ಯಕ್ಷ ಜಯಂತ ಕೋಟ್ಯಾನ್ ಅವರು ಮೂವರನ್ನು ಪಕ್ಷದ ಜವಾಬ್ದಾರಿಯಿಂದ ಮುಕ್ತಗೊಳಿಸಿ ಆದೇಶಿಸಿದ್ದಾರೆ.

ನೆರಿಯ ಗ್ರಾಮ ಪಂಚಾಯತ್ ಸದಸ್ಯರುಗಳಾಗಿದ್ದು ಹಾಲಿ ಅಧ್ಯಕ್ಷರಾಗಿರುವ ಪಕ್ಷದ ಜವಾಬ್ದಾರಿ ಹೊಂದಿರುವ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ವಸಂತಿ ಕಡ್ಡಿಬಾಗಿಲು ಮನೆ, ನೆರಿಯ ಗ್ರಾಮದ ಬೂತ್ ಸಮಿತಿ ಅಧ್ಯಕ್ಷರಾಗಿರುವ ಹಾಲಿ ಗ್ರಾ.ಪಂ.ಸದಸ್ಯೆ ಕುಶಾಲ ಕಡ್ಡಿಬಾಗಿಲು ಮನೆ ಮತ್ತು ನೆರಿಯ ಗ್ರಾಮ ಬೂತ್ ಸಮಿತಿ ಅಧ್ಯಕ್ಷರಾದ ಹಾಲಿ ಗ್ರಾ.ಪಂ.ಸದಸ್ಯ ಸಚಿನ್ ಅಣಿಯೂರು ಕುಲೆನಾಡಿ ಮನೆ ಅವರನ್ನು ತಕ್ಷಣದಿಂದ ಅನ್ವಯವಾಗುವಂತೆ ಭಾರತೀಯ ಜನತಾ ಪಾರ್ಟಿಯ ಎಲ್ಲಾ ಹುದ್ದೆ ಹಾಗೂ ಜವಾಬ್ದಾರಿಗಳಿಂದ ಮುಕ್ತಗೊಳಿಸಿರುವುದಾಗಿ ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version