ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

0

ಗುರುವಾಯನಕೆರೆ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ಸುನ್ನತ್ ಕೆರೆ- ಪೊಟ್ಟುಕೆರೆ (ಶಕ್ತಿ ನಗರ) ಸಂಪರ್ಕ ರಸ್ತೆ ದುರಸ್ಥಿಗೆ ಆಗ್ರಹಿಸಿ ಸುನ್ನತ್ ಕೆರೆ ಹನಫಿ ಮಸೀದಿ ಬಳಿಯಿಂದ ಕಾಲ್ನಡಿಗೆ ಜಾಥಾ ನಡೆಸಿ ನಂತರ ಸುನ್ನತ್ ಕೆರೆ ಜಂಕ್ಷನ್ ನಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಿತು.

ಹಲವಾರು ವರ್ಷಗಳಿಂದ ಈ ಸಂಪರ್ಕ ರಸ್ತೆಯು ಹದೆಗೆಟ್ಟು ದುರಸ್ಥಿ ಕಾಣದೆ ಅಧಿಕಾರಿಗಳ ಮತ್ತು ಶಾಸಕರ ನಿರ್ಲಕ್ಷ್ಯಕ್ಕೆ ಒಳಗಾಗಿದ್ದು ಎಸ್.ಡಿ.ಪಿ.ಐ ವತಿಯಿಂದ ಸಂಬಂಧಪಟ್ಟ ವಿವಿಧ ಅಧಿಕಾರಿಗಳಿಗೆ ಮತ್ತು ಜನಪ್ರತಿನಿಧಿಗಳಿಗೆ ಸರಿ ಪಡಿಸುವಂತೆ ಹಲವು ಭಾರೀ ಮನವಿಯನ್ನು ಸಲ್ಲಿಸಲಾಗಿತ್ತು ಆದರೆ ಇವರುಗಳು ಇದನ್ನು ಸರಿಪಡಿಸದೆ ನಿರ್ಲಕ್ಷ್ಯ ಮಾಡುತ್ತಿದ್ದರು.

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಅಧ್ಯಕ್ಷ ನವಾಝ್ ಕಟ್ಟೆ ಮಾತನಾಡಿ ಇಷ್ಟು ದಿನ ನಮ್ಮ ಮನವಿಗಳನ್ನು ನರ್ಲಕ್ಷಿಸಿ ರಸ್ತೆ ದುರಸ್ಥಿ ಮಾಡದೆ ಇರುವುದರಿಂದ ಇಂದು ಸಾಂಕೇತಿಕವಾಗಿ ಈ ಪ್ರತಿಭಟನೆ ನಡೆಸುತ್ತಾ ಇದ್ದೇವೆ ಮತ್ತು 2 ತಿಂಗಳ ಒಳಗಾಗಿ ಈ ರಸ್ತೆಯನ್ನು ದುರಸ್ಥಿ ಮಾಡದೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಜನರನ್ನು ಸೇರಿಸಿ ಮತ್ತಷ್ಟು ದೊಡ್ಡ ಮಟ್ಟದ ಪ್ರತಿಭಟನೆ ನಡೆಸಲಾಗುದು ಎಂದು ಎಚ್ಚರಿಸಿದರು. ಕುವೆಟ್ಟು ಬ್ಲಾಕ್ ಅಧ್ಯಕ್ಷ ಅಬ್ದುಲ್ ರವೂಫ್ ಪುಂಜಾಲಕಟ್ಟೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಪ್ರತಿಭಟನೆಯಲ್ಲಿ ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನಸಭಾ ಪಕ್ಷ ಸಂಘಟನಾ ಕಾರ್ಯದರ್ಶಿ ನಿಸಾರ್ ಕುದ್ರಡ್ಕ, ಕುವೆಟ್ಟು ಗ್ರಾಮ ಪಂಚಾಯತ್ ಸದಸ್ಯರಾದ ಮುಸ್ತಫಾ ಜಿ.ಕೆ, ಶಮೀಮ್ ಸುನ್ನತ್ ಕೆರೆ, ರಿಯಾಝ್ ಮದ್ದಡ್ಕ, ಹಾಗೂ ಎಸ್.ಡಿ.ಪಿ.ಐ ಬೂತ್ ಅಧ್ಯಕ್ಷ ಅಶ್ರಫ್ ಸುನ್ನತ್ ಕೆರೆ ಮತ್ರು ಗ್ರಾಮ ಸಮಿತಿ ಅಧ್ಯಕ್ಷ ದಾವೂದ್ ಉಪಸ್ಥಿರಿದ್ದರು.

ಕುವೆಟ್ಟು ಗ್ರಾಮ ಪಂಚಾಯತ್ ಕಾರ್ಯದರ್ಶಿಯವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಉನ್ನತ ಅಧಿಕಾರಿಗಳ ಗಮನಕ್ಕೆ ತಂದು ಆದಷ್ಟು ಬೇಗ ರಸ್ತೆ ದುರಸ್ಥಿ ಮಾಡಿಸುದಾಗಿ ಭರವಸೆ ನೀಡಿದರು.

ಸ್ವಾಲಿ ಮದ್ದಡ್ಕ ಸ್ವಾಗತಿಸಿ ಅಸ್ಲಂ ಮದ್ದಡ್ಕ ನಿರೂಪಿಸಿ ಕೊನೆಯಲ್ಲಿ ಧನ್ಯವಾದಗೈದರು.

LEAVE A REPLY

Please enter your comment!
Please enter your name here