ಬೆಳ್ತಂಗಡಿ ಶ್ರೀ ಧ.ಮ.ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್ ಸಿಂಧ್ಯಾ ಭೇಟಿ

0

ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿಯ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯಾ ಸೌಹಾರ್ದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರ 75ನೇ ಹುಟ್ಟು ಹಬ್ಬದ ಪ್ರಯುಕ್ತ ಅವರನ್ನು ಅಭಿನಂದಿಸಿ ಗೌರವಿಸಲಾಯಿತು.ಎಸ್ ಡಿ ಎಂ ಬೆಳ್ತಂಗಡಿಯ ಕಬ್ಸ್ ಬುಲ್ ಬುಲ್ಸ್ ,ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಹುಟ್ಟು ಹಬ್ಬದ ಶುಭಹಾರೈಕೆಯ ಹಾಡಿನೊಂದಿಗೆ ರಾಜ್ಯ ಮುಖ್ಯ ಆಯುಕ್ತರನ್ನು ಬರಮಾಡಿಕೊಂಡರು.ಹಾಗೂ ಮಕ್ಕಳೇ ತಯಾರಿಸಿದ ಹೂವಿನ ಬೊಕ್ಕೆ ಹಾಗೂ ಗ್ರೀಟಿಂಗ್ ಕಾಡ್೯ನ್ನು ಪಿಜಿಆರ್ ಸಿಂಧ್ಯಾರಿಗೆ ನೀಡಿದರು.

ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಪರವಾಗಿ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಹಾಯಕ ಆಯುಕ್ತ ಬಿ. ಸೋಮಶೇಖರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಪದ್ಮ ಕುಮಾರ್ ಸ್ಥಳೀಯ ಸಂಸ್ಥೆಯ ಪರವಾಗಿ ಅಭಿನಂದಿಸಿ ಗೌರವಿಸಿದರು.

ಪಿ ಜಿ ಆರ್ ಸಿಂಧ್ಯ ರವರು ಸ್ಕೌಟ್ಸ್ ಮತ್ತು ಗೈಡ್ಸ್ ಜೀವನದಲ್ಲಿ ಯಾವ ರೀತಿ ನಾವು ನಾಯಕತ್ವವನ್ನು ತೆಗೆದುಕೊಳ್ಳಬೇಕು.ವಿದ್ಯಾರ್ಥಿಗಳು ಉಜ್ವಲ ಭವಿಷ್ಯವನ್ನು ಯಾವ ರೀತಿ ರೂಪಿಸಬೇಕು ಎಂಬುದರ ರೂಪುರೇಷೆಯನ್ನು ನೀಡಿದರುಖಾವಂದರ ಒಡನಾಟ, ಮಧ್ಯ ವರ್ಜನ ಶಿಬಿರವು ಪೂಜ್ಯ ಖಾವಂದರ ನೇತೃತ್ವದಲ್ಲಿ ನಡೆಯುತ್ತಿರುವುದರ ಬಗ್ಗೆ ಪ್ರಶಂಸೆಯನ್ನು ವ್ಯಕ್ತಪಡಿಸಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರು ಬೆಳ್ತಂಗಡಿಯಲ್ಲಿ ಸ್ಕೌಟ್ ಗೈಡ್ ಭವನ ನಿರ್ಮಾಣಕ್ಕಾಗಿ ಶ್ರಮಪಡುತ್ತಿರುವುದನ್ನು ಶ್ಲಾಘಿಸಿದರು.

ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್ ಉಪಸ್ಥಿತರಿದ್ದರು

ಅಧ್ಯಕ್ಷ ಪದ್ಮ ಕುಮಾರ್ ವಂದಿಸಿದರು, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ ಪ್ರಮೀಳ ಸ್ವಾಗತಿಸಿ, ನಿರೂಪಿಸಿದರು.ಮಕ್ಕಳ ಪೋಷಕರು, ಕಬ್ಸ್ ಬುಲ್ ಬುಲ್ಸ್ ಸ್ಕೌಟ್ ಗೈಡ್ ವಿದ್ಯಾರ್ಥಿಗಳು, ಸ್ಥಳೀಯ ಸಂಸ್ಥೆಯ ಪದಾಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here