ಕನ್ಯಾಡಿ ಶಾಲಾ ನಿವೃತ್ತ ಶಿಕ್ಷಕ ವೀರಣ್ಣ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ

0

ಧರ್ಮಸ್ಥಳ :ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ ಈ ಇಲ್ಲಿ 15 ವರ್ಷ ಸಹಶಿಕ್ಷಕರಾಗಿ ಕರ್ತವ್ಯ ನಿರ್ವಹಿಸಿ ವಯೋ ನಿವೃತ್ತರಾದ ವೀರಣ್ಣ ಶೆಟ್ಟಿ ಇವರಿಗೆ ಶಾಲಾ ವತಿಯಿಂದ ಸನ್ಮಾನ ಕಾರ್ಯಕ್ರಮವನ್ನು ನಡೆಯಿತು.

ಶಾಲಾ ಎಸ್. ಡಿ .ಎಂ. ಸಿ ಅಧ್ಯಕ್ಷ ನಂದ.ಕೆ. ಅಧ್ಯಕ್ಷತೆ ವಹಿಸಿದ್ದರು. ಧರ್ಮಸ್ಥಳ ಗ್ರಾಮ ಪಂಚಾಯಿತ್ ಉಪಾಧ್ಯಕ್ಷ ಶ್ರೀನಿವಾಸ್ ರಾವ್, ಗ್ರಾಮ ಪಂಚಾಯತಿ ಸದಸ್ಯರಾದ ಹರೀಶ್ ಸುವರ್ಣ, ಭಾರತಿ ಶಾಲಾ ಎಸ್‌.ಡಿ.ಎಂ.ಸಿ ಉಪಾಧ್ಯಕ್ಷೆ ರಮ್ಯ, ಸದಸ್ಯರು, ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಪ್ರಭಾಕರ್ ಬೊಳ್ಮ,ಗೌರವ ಸಲಹೆಗಾರ ನವೀನ್ ಚಂದ್ರ ಶೆಟ್ಟಿ, ಸುಂದರ ಗೌಡ ಪುಡ್ಕೆತ್ತು , ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಮರಿಯಪ್ಪ ಗೌಡ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಗೌರವ ಸಲಹೆಗಾರ ರಾಜೇಂದ್ರ ಅಜ್ರಿ ಸ್ವಾಗತಿಸಿ, ಅತಿಥಿ ಶಿಕ್ಷಕಿ ದಿವ್ಯಶ್ರೀ ವಂದಿಸಿದರು.

ಶಾಲಾ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಸೂರ್ಯಪ್ರಕಾಶ್ ನಿರೂಪಿಸಿದರು.

LEAVE A REPLY

Please enter your comment!
Please enter your name here