ಮಿತ್ತಬಾಗಿಲು ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸನ್ಮಾನ

0

ಮಿತ್ತಬಾಗಿಲು ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ 5 ಎಕರೆ ಸ್ಥಳದಲ್ಲಿ ವಿವಿಧ ತಳಿಗಳ ಬತ್ತದ ಕೃಷಿಯನ್ನು ಯಾವುದೇ ರಾಸಾಯನಿಕ ಗೊಬ್ಬರಗಳನ್ನು ಹಾಗೂ ಕೀಟನಾಶಗಳನ್ನು ಬಳಸದೆ ನೈಸರ್ಗಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಸಾವಯವ ಕೃಷಿಯಲ್ಲಿ ಯಶಸ್ವಿ ಕೃಷಿಕರಾಗಿ ರಾಷ್ಟ್ರಮಟ್ಟದಲ್ಲಿ ಗುರುತಿಸಲ್ಪಟ್ಟ ಬಿ.ಕೆ ದೇವರಾವು ಅವರನ್ನು ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸೆ. 09 ಗೌರವಿಸಲಾಯಿತು.

ಭತ್ತದ ತಳಿಗಳ ಮಾಹಿತಿಯನ್ನು ನೀಡಿ ಸಹಕರಿಸಿದರು.

ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿಯೂ ಆದ ಡಾ.ಕೆ.ಜಯಕೀರ್ತಿ ಜೈನ್, ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ಗೌರವ ಸಲಹೆಗಾರ ವಸಂತ ಸುವರ್ಣ, ನಿರ್ದೇಶಕ ಚಂದ್ರಶೇಖರ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here