Site icon Suddi Belthangady

ಮಿತ್ತಬಾಗಿಲು: ಬೆಳ್ತಂಗಡಿ ವನ್ಯ ಜೀವಿ ವಲಯದ 69ನೇ ವರ್ಷದ ಸಪ್ತಾಹ

ಮಿತ್ತಬಾಗಿಲು: ಸೆ.08ರಂದು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೆಳ್ತಂಗಡಿ ವನ್ಯಜೀವಿ ವಲಯದ ವತಿಯಿಂದ 69ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವು ನಡೆಯಿತು.

ಸಭೆಯ ಅಧ್ಯಕ್ಷತೆಯನ್ನು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕಿಲ್ಲೂರು ಇದರ ಮುಖ್ಯೋಪಾಧ್ಯಾಯರಾದ ರಮೇಶ್ ಇವರು ವಹಿಸಿಕೊಂಡಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿನಯಚಂದ್ರ ನೆರವೇರಿಸಿದರು.

ವೇದಿಕೆಯಲ್ಲಿ ವಲಯ ಅರಣ್ಯ ಅಧಿಕಾರಿ ವನ್ಯಜೀವಿ ವಲಯ ಬೆಳ್ತಂಗಡಿ ಸ್ವಾತಿ ಇವರು ಉಪಸ್ಥಿತಿ ಇದ್ದರು.

ಉಪವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಸ್ವಾಗತಿಸಿ, ಧನ್ಯವಾದ ನೆರವೇರಿಸಿ, ಅಮಿತನಂದ ಹೆಗ್ಡೆ ನಿರೂಪಿಸಿದರು.

Exit mobile version