Site icon Suddi Belthangady

ಬಳಂಜ ಗ್ರಾ.ಪಂ ಗೆ ಪ್ರತಿಷ್ಠಿತ ಶಿವರಾಮ ಕಾರಂತ ಪ್ರಶಸ್ತಿ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಂದ ಪ್ರಶಸ್ತಿ ಪ್ರದಾನ

ಬೆಳ್ತಂಗಡಿ: ಬಳಂಜ ಗ್ರಾಮ ಪಂಚಾಯತ್ ಗೆ ಗಾಂಧಿ ಗ್ರಾಮ ಪ್ರಶಸ್ತಿ ಲಭಿಸಿದ ಬೆನ್ನಲ್ಲೇ ಮತ್ತೊಂದು ಉನ್ನತವಾದ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

ಕೋಟತಟ್ಟು ಗ್ರಾಮ ಪಂಚಾಯತ್, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ, ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ ಇದರ ಸಹಯೋಗದಲ್ಲಿ ಇಂಪನ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರು ಬಳಂಜ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶೋಭಾ ಕುಲಾಲ್, ಪಿಡಿಓ ಶ್ರೀನಿವಾಸ್, ಉಪಾಧ್ಯಕ್ಷ ಯಶೋಧರ ಶೆಟ್ಟಿ ರವರಿಗೆ ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಜಿಲ್ಲೆಯ ಶಾಸಕರುಗಳು, ಜನಪ್ರತಿನಿಧಿಗಳು, ಬಳಂಜ ಗ್ರಾಮ ಪಂಚಾಯತ್ ನ ಸದಸ್ಯರಾದ ಹೇಮಂತ್, ಬೇಬಿ ನಾರಾಯಣ, ಪದ್ಮಾವತಿ, ಯಕ್ಷಿತಾ ದೇವಾಡಿಗ, ಸುಚಿತ್ರಾ, ಪ್ರಸನ್ನ ಉಪಸ್ಥಿತರಿದ್ದರು.

ಗ್ರಾಮ ಪಂಚಾಯತುಗಳಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಉತ್ತೇಜನ, ಜನಪರ ಆಡಳಿತ, ಪಂಚಾಯತು ವ್ಯಾಪ್ತಿಯಲ್ಲಿ ಹಮ್ಮಿಕೊಂಡ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ, ಮೊದಲಾದ ಉತ್ತಮ ಕಾರ್ಯಗಳನ್ನು ಪರಿಗಣಿಸಿ ಅರ್ಹವಾಗಿ ಶಿವರಾಮ ಕಾರಂತ ಪ್ರಶಸ್ತಿ ಲಭಿಸಿದೆ.

ಅಷ್ಟೇ ಅಲ್ಲದೆ ಬಳಂಜ ಪಂಚಾಯತ್ ಗೆ ಗಾಂಧಿ ಗ್ರಾಮ ಪ್ರಶಸ್ತಿ ದೊರೆತ ಬೆನ್ನಲ್ಲೇ ಶಿವರಾಮ ಕಾರಂತ ಪ್ರಶಸ್ತಿ ದೊರಕಿರುವುದು ತಾಲೂಕಿನಲ್ಲಿ ಹೆಗ್ಗಳಿಕೆಯ ಪಾತ್ರವಾಗಿದೆ.

Exit mobile version