ದ.ಕ ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ಮ್ಯಾಟ್ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭ

0

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ವತಿಯಿಂದ ಅ.6 ರಂದು ಹಮ್ಮಿಕೊಂಡ ದ.ಕ ಮತ್ತು ಉಡುಪಿ ಅಂತರ್ ಜಿಲ್ಲಾ ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿಗಳ ಮ್ಯಾಟ್ ಕಬಡ್ಡಿ ಪಂದ್ಯಾಟದ ಸಮಾರೋಪ ಸಮಾರಂಭವು ಕಾಲೇಜು ಕ್ಯಾಂಪಸ್ ನಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ವಹಿಸಿದ್ದರು ಮತ್ತು ಅತಿಥಿಗಳಾಗಿ ಮೋಹನ್ ಕುಮಾರ್ ಲಕ್ಷ್ಮೀ ಇಂಡಸ್ಟ್ರೀಸ್ ಉಜಿರೆ, ಯುವರಾಜ ಪೂವಣಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಎಸ್.ಡಿ.ಎಂ ಸೊಸೈಟಿ ಉಜಿರೆ, ಸೋಮಶೇಖರ್ ಶೆಟ್ಟಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಎಸ್.ಡಿ.ಎಂ ಸೊಸೈಟಿ ಉಜಿರೆ ಉಪಸ್ಥಿತರಿದ್ದರು.

ಎಸ್.ಡಿ.ಎಂ ಕಬಡ್ಡಿ ಕೋಚ್ ಕೃಷ್ಣಾನಂದ ರಾವ್, ಕಾಲೇಜು ವ್ಯವಸ್ಥಾಪಕ ಚಂದ್ರನಾಥ್ ಜೈನ್, ದೈಹಿಕ ಶಿಕ್ಷಣ ನಿರ್ದೇಶಕ ನಿತಿನ್ ಪೂಜಾರಿ ಮತ್ತಿತರರಿದ್ದರು.

ಪ್ರಥಮ ಸ್ಥಾನವನ್ನು ಕೆವಿಜಿ ಪಾಲಿಟೆಕ್ನಿಕ್ ಸುಳ್ಯ ಮತ್ತು ದ್ವಿತೀಯ ಸ್ಥಾನವನ್ನು ಎಸ್ಎನ್ ಎಸ್ ಪಾಲಿಟೆಕ್ನಿಕ್ ಸುಂಕದಕಟ್ಟೆ ಪಡೆದುಕೊಂಡಿತು.

LEAVE A REPLY

Please enter your comment!
Please enter your name here