ಬೆಳ್ತಂಗಡಿ: ಪ್ರ.ದ.ಕಾಲೇಜಿನಲ್ಲಿ ನನ್ನ ಮಣ್ಣು, ನನ್ನ ದೇಶ ಅಮೃತ ಕಲಶ ಯಾತ್ರೆಗೆ ಚಾಲನೆ

0

ಬೆಳ್ತಂಗಡಿ: ದ.ಕ.ಜಿಲ್ಲಾ ಪಂಚಾಯತ್, ನೆಹರು ಯುವ ಕೇಂದ್ರ, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಮೆಲಂತಬೆಟ್ಟು, ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, JCI ಮಂಜುಶ್ರೀ ಬೆಳ್ತಂಗಡಿ, ತಾಲೂಕು ಯುವಜನ ಒಕ್ಕೂಟ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಬೆಳ್ತಂಗಡಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮೇರಿ ಮಾಟಿ ಮೇರಿ ದೇಶ್ ( ನನ್ನ ಮಣ್ಣು, ನನ್ನ ದೇಶ ) ಕಾರ್ಯಕ್ರಮದ ಅಂಗವಾಗಿ ಅಮೃತ ಕಲಶ ಯಾತ್ರೆಯನ್ನು ರಾಷ್ಟ್ರೀಯ ಸೇವಾ ಯೋಜನೆ, ಎನ್ ಸಿ ಸಿ, ರೋವರ್ಸ್ ಮತ್ತು ರೇಂಜರ್ಸ್ , ಐಕ್ಯುಎಸಿ ಇದರ ಆಶ್ರಯದಲ್ಲಿ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ ಬಿ.ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ “ಮನ್ ಕೀ ಬಾತ್ ನಲ್ಲಿ ದೇಶವಾಸಿಗಳಿಗೆ ನೀಡಿದ ಕರೆಯಂತೆ ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನವಾದ ಹುತಾತ್ಮ ಯೋಧರ ಸ್ಮರಣೆಗಾಗಿ ದೇಶದ 7500 ಹಳ್ಳಿಗಳಿಂದ ಮಣ್ಣನ್ನು ಸಂಗ್ರಹಿಸಿ ದೆಹಲಿಯಲ್ಲಿ ಅಮೃತ ವಾಟಿ ಉದ್ಯಾನವನ ನಿರ್ಮಿಸಲು ಅಮೃತ ಕಲಶದಲ್ಲಿ ಮಣ್ಣನ್ನು ರವಾನಿಸಲಾಗುತ್ತಿದೆ.ಈ ರೀತಿಯಾಗಿ ಯೋಧರ ಕೊಡುಗೆಯನ್ನು ಸ್ಮರಿಸಲಾಗುತ್ತಿದೆ ಎಂದರು.

ಕಾರ್ಯಕ್ರಮಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ್ ಎನ್ ಹಾಗೂ ಕನ್ನಡ ಉಪನ್ಯಾಸಕರಾದ ಡಾ. ಸುಬ್ರಹ್ಮಣ್ಯ ಕೆ ಶುಭ ಕೋರಿದರು.

ಮೆಲಂತಬೆಟ್ಟು ಗ್ರಾಮ ಪಂಚಾಯತ್ ಅದ್ಯಕ್ಷರಾದ ಶ್ರೀಮತಿ ಸವಿತಾ, ಪಂಚಾಯತ್ ಉಪಾಧ್ಯಕ್ಷರಾದ ಲೋಕನಾಥ ಶೆಟ್ಟಿ, ಮೆಲಂತಬೆಟ್ಟು ಗ್ರಾ.ಪಂ. ನ ಪ್ರಭಾರ ಪಿಡಿಒ ನಿರ್ಮಲ್ ಕುಮಾರ್, ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಮೇಲ್ವಿಚಾರಕರಾದ ಶಾಂತಪ್ಪ, ಜಿಲ್ಲಾ ಯುವಜನ ಒಕ್ಕೂಟದ ನಿರ್ದೇಶಕರಾದ ಚಿದಾನಂದ ಇಡ್ಯ, ಜೆ ಸಿ ಐ ಮಂಜುಶ್ರೀಯ ಕಾರ್ಯಕ್ರಮ ಸಂಯೋಜಕರಾದ ಅನುದೀಪ್ ಜೈನ್ , ಪಂಚಾಯತ್ ಸದಸ್ಯರಾದ ಚಂದ್ರರಾಜ್, ಪಂಚಾಯತ್ ಸಿಬ್ಬಂದಿ ವರ್ಗದವರು, ಕಾಲೇಜಿನ ಉಪನ್ಯಾಸ ವರ್ಗದವರು, ಉಪಸ್ಥಿತರಿದ್ದರು.

ಕು.ಶ್ರದ್ಧಾ ಕಾರ್ಯಕ್ರಮ ನಿರೂಪಿಸಿ, ಕು.ರಕ್ಷಿತಾ ಸ್ವಾಗತಿಸಿದರು.ಕು.ಶರಣ್ಯ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here