ಬೆಳ್ತಂಗಡಿ: ಶಿಕ್ಷಕ ಯಾಕೂಬ್ ಎಸ್.ಕೊಯ್ಯೂರು ಅವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ

0

ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ ೨೦೨೩ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ಇದರ ಸಹಕಾರದೊಂದಿಗೆ ಮಾಮರ ಪ್ರಕಾಶನ ಮೈಸೂರು ಇವರು ಪ್ರಕಟಿಸಿರುವ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್.ಎಸ್ ಕೊಯ್ಯೂರು ಇವರ ಚಿಂತನಾ ಬರಹಗಳ ಸಂಕಲನ ಮೌಲ್ಯಗಳ ಹುಡುಕಾಟದಲ್ಲಿ (ಬರಹಗಳ ಸಂಕಲನ) ಪುಸ್ತಕ ಬಿಡುಗಡೆ ಸಮಾರಂಭವು ವಾಣಿ ಪ.ಪೂ ಕಾಲೇಜಿನಲ್ಲಿ ಅ.14ರಂದು ನೆರವೇರಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಇದರ ಅಧ್ಯಕ್ಷ ಲ| ಉಮೇಶ್ ಶೆಟ್ಟಿ ಇವರು ವಹಿಸಿದ್ದರು.ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಯದುಪತಿ ಗೌಡ ಪುಸ್ತಕ ಬಿಡುಗಡೆಗೊಳಿಸಿದರು.

ಮುಖ್ಯ ಅತಿಥಿಯಾಗಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರಬಂಟ್ವಾಳ ಇದರ ಅಧ್ಯಕ್ಷ ಡಾ.ತುಕರಾಮ ಪೂಜಾರಿ, ಮೌಲ್ಯಗಳ ಹುಡುಕಾಟ ಪುಸ್ತಕದ ಲೇಖಕ ಯಾಕೂಬ್.ಎಸ್ ಕೊಯ್ಯೂರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು, ಸದಸ್ಯರು, ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು.

ಪತ್ರಕರ್ತ ಅಶ್ರಫ್ ಆಲಿಕುಂಞ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು.

LEAVE A REPLY

Please enter your comment!
Please enter your name here