ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ “ಅಟ್ಟಳಿಗೆಯ ಸ್ತಂಭ ನ್ಯಾಸ” ಕಾರ್ಯಕ್ರಮ

0

ವೇಣೂರು: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಫೆಬ್ರವರಿ 2024ಕ್ಕೆ ನಡೆಯಲಿದ್ದು ಇದರ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಹಾಗೂ ಕಾರ್ಯಕ್ರಮವು ಅ.16 ರಂದು ನಡೆಯಿತು.

ಮೂಡಬಿದ್ರೆ ಜೈನ ಮಠದ ಡಾ.ಚಾರುಕೀರ್ತಿ ಸ್ವಾಮೀಜಿ, ಮತ್ತು ಚಾಮರಾಜನಗರದ ಶ್ರೀ ಕ್ಷೇತ್ರ ಕನಕಗಿರಿ ಭುವನಕೀರ್ತಿ ಭಟ್ಟಾರಕ ಸ್ವಾಮೀಜಿ ದೀಪ ಬೆಳಗಿಸಿದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷ ಸಹಕಾರ ರತ್ನ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಅಟ್ಟಳಿಗೆಯ ಸ್ತಂಭ ನ್ಯಾಸ ನೆರವೇರಿಸಿದರು.

ಅಧ್ಯಕ್ಷತೆಯನ್ನು ಕರ್ನಾಟಕ ಸರಕಾರದ ಯೋಜನೆ ಮತ್ತು ಅಂಕಿ ಅಂಶಗಳ ಇಲಾಖೆಯ ಸಚಿವ ಡಿ. ಸುಧಾಕರ್‌ ವಹಿಸಿದ್ದರು. ಮಹಾಮಸ್ತಕಾಭಿಷೇಕದ ಕಾರ್ಯಾಧ್ಯಕ್ಷರು ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಗೌರವ ಉಪಸ್ಥಿತರಿದ್ದರು.

ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಕೋಲಾರದ ಸಂಸದ ಮುನಿಸ್ವಾಮಿ, ವಿಧಾನಪರಿಷತ್‌ ಶಾಸಕ ಪ್ರತಾಪ್‌ ಸಿಂಹ ನಾಯಕ್‌, ಎಸ್‌.ಎಲ್‌ ಭೋಜೆ ಗೌಡ, ಮಾಜಿ ಸಚಿವ ಅಭಯಚಂದ್ರ ಜೈನ್, ಭಾಗವಹಿಸಿದ್ದರು.

ಮಹಾಮಸ್ತಕಾಭಿಷೇಕ ಮಹೋತ್ಸವದ ಪ್ರಧಾನ ಕಾರ್ಯದರ್ಶಿ ಪ್ರವೀಣ್‌ ಕುಮಾರ್ ಇಂದ್ರ ಸ್ವಾಗತಿಸಿದರು.ಸಮಿತಿಯ ಕೋಶಾಧಿಕಾರಿ ಎಂ. ಕೆ. ವಿಜಯಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸಮಿತಿಯ ಪದಾಧಿಕಾರಿಗಳು, ಭಕ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here