ಉಜಿರೆ: ಎಸ್.ಡಿ.ಎಂ. ಪ.ಪೂ ಕಾಲೇಜಿನಲ್ಲಿ ವಿಶ್ವ ಕರಪ್ರಕ್ಷಾಲನಾ ದಿನಾಚರಣೆ

0

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಕೈ ತೊಳೆಯುವ ದಿನಾಚರಣೆ ನಡೆಸಲಾಯಿತು.

ಪ್ರಾಚಾರ್ಯ ಪ್ರಮೋದ್ ಕುಮಾರ್ ಅವರು ವೈಜ್ಞಾನಿಕವಾಗಿ ಕೈ ತೊಳೆಯುವ ಪರಿಪಾಠ ಮಾಡಿಕೊಳ್ಳಬೇಕು.ರೋಗ ರುಜಿನಗಳಿಗೆ ಕೈ ಯನ್ನು ಸರಿಯಾಗಿ ತೊಳೆದುಕೊಳ್ಳುವುದು ಅವಶ್ಯ ಎಂದು ಕರೆಕೊಟ್ಟರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅವರು ವೈಜ್ಞಾನಿಕವಾಗಿ ಕೈ ತೊಳೆಯುವ ಕ್ರಮಗಳನ್ನು ಪ್ರಾತ್ಯಕ್ಷಿಕೆಯ ಮೂಲಕ ಹೇಳಿಕೊಟ್ಟರು.

ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್, ಘಟಕದ ನಾಯಕಿ ದಕ್ಷಾ ಹಾಗೂ ಸ್ವಯಂ ಸೇವಕರು ಉಪಸ್ಥಿತರಿದ್ದರು.

ಘಟಕದ ನಾಯಕ ಸುದರ್ಶನ ನಾಯಕ್ ವಂದಿಸಿದರು. 

LEAVE A REPLY

Please enter your comment!
Please enter your name here