ಉಜಿರೆ ಗ್ರಾ.ಪಂ ಗೆ ಬೀದರ್ ಖುಶ್ನೂರು ಪಂಚಾಯತ್ ಆಡಳಿತ ಮಂಡಳಿ ಭೇಟಿ

0

ಉಜಿರೆ: 2023-24ನೇ ಸಾಲಿನ ರಾಷ್ಟ್ರೀಯ ಗ್ರಾಮ ಸ್ವರಾಜ್ ಅಭಿಯಾನ ದಡಿ, 2021-22ನೇ ಸಾಲಿನಲ್ಲಿ ಉತ್ತಮ ಸಾಧನೆಗೈದು ಗಾಂಧಿ ಗ್ರಾಮ ಪುರಸ್ಕಾರ ಪಡೆದ ಗ್ರಾಮ ಪಂಚಾಯತ್ ಗಳು ಕರ್ನಾಟಕದ ಇನ್ನೊಂದು ಉತ್ತಮ ಸಾಧನೆಗೈದ ಗಾಂಧಿ ಗ್ರಾಮ ಪುರಸ್ಕೃತ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ, ಅಲ್ಲಿನ ಉತ್ತಮ ಕಾರ್ಯಸಾಧನೆಗೆ ಅನುಸರಿಸಿದ ಕಾರ್ಯತಂತ್ರಗಳನ್ನು ಅಧ್ಯಯನ ಮಾಡಲು ಕರ್ನಾಟಕ ರಾಜ್ಯ ಸರಕಾರವು ಪರಸ್ಪರ ಕಲಿಕಾ ಕಾರ್ಯಕ್ರಮ ಅನುಷ್ಠಾನಗೊಳಿಸಿರುತ್ತದೆ.

ಅದರಂತೆ, ಬೀದರ್ ಜಿಲ್ಲೆ ಕಮಲನಗರ ತಾಲೂಕಿನ ಠಾಣಾ ಖುಶ್ನೂರು ಗ್ರಾಮ ಪಂಚಾಯತಿನ ಆಡಳಿತ ಮಂಡಳಿಯ ಸದಸ್ಯರು ಹಾಗೂ ಅಧಿಕಾರಿ ಮತ್ತು ಸಿಬ್ಬಂದಿ ವರ್ಗದವರು ಅ.17ರಂದು ಉಜಿರೆ ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದರು.

ಉಜಿರೆ ಗ್ರಾಮ ಪಂಚಾಯತಿನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ, ಸ್ವಚ್ಛ ಸಂಕೀರ್ಣ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ, ಮಲತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ, ಘಟಕಗಳ ಕಾರ್ಯನಿರ್ವಹಣೆಯ ಕುರಿತು ಮಾಹಿತಿ ಪಡೆದರು.

ಬಳಿಕ, ಉಜಿರೆ ಗ್ರಾಮ ಪಂಚಾಯತ್ ನ ನೂತನ ಅಮೃತ ಸಭಾಂಗಣದಲ್ಲಿ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ ಅವರ ಅಧ್ಯಕ್ಷತೆಯಲ್ಲಿ ಔಪಚಾರಿಕ ಸಭೆಯು ಜರುಗಿತು.

ಈ ಸಂದರ್ಭದಲ್ಲಿ, ಉಜಿರೆ ಗ್ರಾಮ ಪಂಚಾಯತ್ ಆಡಳಿತ ಮಂಡಳಿಯ ವತಿಯಿಂದ ಠಾಣಾ ಖುಶ್ನೂರೂ ಗ್ರಾಮ ಪಂಚಾಯತ್ ಗೆ RO/UV ಫಿಲ್ಟರ್ ಅನ್ನು ಹಸ್ತಾಂತರಿಸಲಾಯಿತು.

ಉಪಾಧ್ಯಕ್ಷರು ರವಿ ಕುಮಾರ್, ಸದಸ್ಯರು,ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್ , ಠಾಣಾ ಖುಶ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷ ಕಾಶೀನಾಥ ಸಂಗಪ್ಪಾ ಜೀರಗೆ, ಸದಸ್ಯರು, ಪಿಡಿಒ ಮನೋಹರ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here