ಬೆಳ್ತಂಗಡಿಯಲ್ಲಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

0

ಬೆಳ್ತಂಗಡಿ : ಇಲ್ಲಿಯ ಚರ್ಚ್ ರೋಡ್ ಬಳಿ ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಅ.15ರಂದು ಶುಭಾರಂಭಗೊಂಡಿತು.

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ಉದ್ಘಾಟಿಸಿ ಸಂಸ್ಥೆಯು ದೇವರ ದಯದಿಂದ ಉತ್ತರೋತ್ತರವಾಗಿ ಬೆಳಗಲಿ ಎಂದು ಶುಭಹಾರೈಸಿದರು.ನೂತನ‌ ಸಂಸ್ಥೆಗೆ ಬೆಳ್ತಂಗಡಿ ಚರ್ಚ್ ನ ಧರ್ಮಗುರುಗಳು ಶುಭಕೋರಿದರು.

ಕಾರ್ಯಕ್ರಮದಲ್ಲಿ ಮಾಲಕರ ಮಾತ-ಪಿತರಾದ ಗಿರಿಜಾ-ರಾಮಣ್ಣ ಪೂಜಾರಿ, ಉದ್ಯಮಿ ಚಂದ್ರಶೇಖರ್, ಪಟ್ಟಣ ಪಂಚಾಯತ್ ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ, ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಅಶ್ವಥ್ ಕುಮಾರ್, ಉಜಿರೆ ಗ್ರಾ.ಪಂ ಸದಸ್ಯ ಗುರುಪ್ರಸಾದ್, ಪ್ರಮುಖರಾದ ಅಣ್ಣು ಪೂಜಾರಿ ಗಂಪದಕೋಡಿ ಕೊಲ್ಲಿ ಹಾಗೂ ಇತರರು ಉಪಸ್ಥಿತರಿದ್ದು ಶುಭಾಶಯ ತಿಳಿಸಿದರು.

ಸಂಸ್ಥೆಯ ಮಾಲಕರಾದ ರಶ್ಮಿ ಮತ್ತು ನವೀನ್ ಕುಮಾರ್ ಇಂದಬೆಟ್ಟು, ಮಕ್ಕಳಾದ ಸಾಹಿತ್ಯ, ಶ್ರೀಯಾನ್ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ, ಸತ್ಕರಿಸಿದರು.

LEAVE A REPLY

Please enter your comment!
Please enter your name here