ಮುಳುಗುತಜ್ಞ ಕಾಂಜ ಧರ್ಮಸ್ಥಳ ನಿಧನ- ಧರ್ಮಸ್ಥಳ ಗ್ರಾಮ ಪಂಚಾಯತ್ ಸಂತಾಪ

0

ಧರ್ಮಸ್ಥಳ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜವಾನ ಕಮ್ ಕಾವಲುಗಾರ ಸೇವೆ ಸಲ್ಲಿಸುತ್ತಿದ್ದ ಕಾಂಜ ಧರ್ಮಸ್ಥಳ ಅಲ್ಪಕಾಲದ ಅನಾರೋಗ್ಯ ದಿಂದ ಮಂಗಳೂರು ವೆನ್ಲಾಕ್ ಆಸ್ಪತ್ರೆ ಯಲ್ಲಿ ನಿಧನರಾದರು.

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಪ್ರಾಮಾಣಿಕ ಸೇವೆಯಲ್ಲಿ ಜನರ ಮೆಚ್ಚುಗೆಗೆ ಪಾತ್ರರಾಗಿ ಸೇವಾ ನಿವೃತ್ತಿ ಹೊಂದಿದ್ದರು.

ಖ್ಯಾತ ಮುಳುಗುತಜ್ಞರಾಗಿದ್ದ ಇವರು ನೆರೆ ಪ್ರವಾಹ ಸಂದರ್ಭದಲ್ಲಿ ನೇತ್ರಾವತಿ ನದಿಯಲ್ಲಿ ತಾಲೂಕಿನ ಇತರ ಕಡೆಗಳಲ್ಲಿ ಮುಳುಗಿರುವ ಅದೆಷ್ಟೋ ಜನರನ್ನು ಬದುಕಿಸಿದ ಹೆಗ್ಗಳಿಕೆಗೆ ಪಾತ್ರವಾಗಿ ಆಪದ್ಬಾಂಧವ ವ್ಯಕ್ತಿ ಎನಿಸಿಕೊಂಡಿದ್ದರು.

ಇವರ ನಿಧನಕ್ಕೆ ಧರ್ಮಸ್ಥಳ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು.

ಮೃತರು ಪತ್ನಿ ಮಕ್ಕಳು ಬಂಧು-ವರ್ಗದವರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here