Site icon Suddi Belthangady

ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆ

ಬೆಳ್ತಂಗಡಿ: ಗುರುದೇವ ಎಜುಕೇಷನಲ್ ಟ್ರಸ್ಟ್, ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯ ದಶಮಾನೋತ್ಸವದ ಪ್ರಯುಕ್ತ ಅಂತರ್ ಕಾಲೇಜು ಭಾಷಣ ಮತ್ತು ಚರ್ಚಾ ಸ್ಪರ್ಧೆಯ ಕಾರ್ಯಕ್ರಮ ಅ.20ರಂದು ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ, ಸಂಸ್ಥೆಯ ಅಧ್ಯಕ್ಷ ಕೆ.ವಸಂತ ಬಂಗೇರ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಭಾಗಮಂಡಲದ ಸಹ ಶಿಕ್ಷಕ ಡಾ.ಪ್ರವೀಣ್ ಭಾಗವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತ ಉಪಸ್ಥಿತರಿದ್ದರು.

ಸ್ಪರ್ಧೆಯ ವಿಜೇತರು ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಹಸ್ತವಿ ಹಾಗೂ ದ್ವಿತೀಯ ಸ್ಥಾನವನ್ನು ಪುತ್ತೂರಿನ ಅಂಬಿಕಾ ಮಹಾವಿದ್ಯಾಲಯ ವಿದ್ಯಾರ್ಥಿನಿ ಪಂಚಮಿ ಬಾಕಿಲ ಪದವು ಪಡೆದರು.

ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಾದ ಸ್ಪರ್ಶ ಮತ್ತು ಮನೋಜ್ ಮತ್ತು ದ್ವಿತೀಯ ಸ್ಥಾನವನ್ನು ಗುರುದೇವ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿಗಳಾದ ಹಸ್ತವಿ ಹಾಗೂ ಚಂದನ ಪಡೆದರು.

ಅರ್ಥಶಾಸ್ತ್ರ ಉಪನ್ಯಾಸಕಿ ಬಬಿತಾ ಸ್ವಾಗತಿಸಿ, ಉಪನ್ಯಾಸಕಿ ಸೌಮ್ಯ ವಂದಿಸಿದರು.ಉಪನ್ಯಾಸಕಿ ಪವಿತ್ರ ನಿರೂಪಿಸಿದರು.

Exit mobile version