ಅನಂತೋಡಿ: ಕೆಸರು ಗದ್ದೆ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ

0

ಬೆಳಾಲು: ಶ್ರೀ ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ಶ್ರೀ ಅನಂತ ಪದ್ಮನಾಭಾ ದೇವಸ್ಥಾನದ ಅನಂತೋಡಿ ಬೈಲು ಗದ್ದೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.19 ರಂದು ನಡೆಯಲಿರುವ 13 ನೇ ವರ್ಷದ ಕೆಸರು ಗದ್ದೆ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಅ.22ರಂದು ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಶ್ರೀ ಅನಂತೇಶ್ವರ ಫ್ರೆಂಡ್ಸ್ ಗೌರವ ಅಧ್ಯಕ್ಷ ಕಾಂತಪ್ಪ ಗೌಡ ಕಂಬಳದಡ್ಡ, ಅಧ್ಯಕ್ಷ ಸುಮಿತ್ ಆಚಾರ್ಯ, ಕಾರ್ಯದರ್ಶಿ ಹರಿಪ್ರಸಾದ್ ಅರಣೆಮಾರು, ಗೌರವ ಸಲಹೆಗಾರರುಗಳಾದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡ, ಗ್ರಾಮ ಪಂಚಾಯತ್ ಸದಸ್ಯ ಸತೀಶ್ ಎಳ್ಳುಗದ್ದೆ, ಯಶವಂತ ಬನಂದೂರು, ಅಶೋಕ ಕೆ.ಎಂ, ಭಜನಾ ಮಂಡಳಿಯ ಕಾರ್ಯದರ್ಶಿ ವಿಘ್ನೇಶ್, ಸಮಿತಿಯ ಸದಸ್ಯರು ಹಾಜರಿದ್ದರು

LEAVE A REPLY

Please enter your comment!
Please enter your name here