Site icon Suddi Belthangady

ಬೆಳಾಲು: ಪೆರಿಯಡ್ಕ ಚಿತ್ತಾರ ಯುವಶಕ್ತಿ ಗೆಳೆಯರ ಬಳಗದಿಂದ ಸಾರ್ವಜನಿಕ ಶ್ರೀ ಶಾರದಾ ಪೂಜೆ ಮತ್ತು ಕ್ರೀಡಾಕೂಟ ಉದ್ಘಾಟನೆ

ಬೆಳಾಲು: ಪೆರಿಯಡ್ಕ ಚಿತ್ತಾರ ಯುವಶಕ್ತಿ ಗೆಳೆಯರ ಬಳಗದಿಂದ ಸಾರ್ವಜನಿಕ ಶ್ರೀ ಶಾರದಾ ಪೂಜೆ ಮತ್ತು ಕ್ರೀಡಾ ಕೂಟ ಉದ್ಘಾಟನೆ ಆ.24 ರಂದು ಸ.ಕಿ.ಪ್ರಾಥಮಿಕ ಶಾಲೆ ಪೆರಿಯಡ್ಕದಲ್ಲಿ ನಡೆಯಿತು.

ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ಅರ್ಚಕ ಅನಂತರಾಮ ಶಬರಾಯ ಉದ್ಘಾಟಿಸಿ ಶುಭ ಹಾರೈಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಣಾಧಿಕಾರಿ ನಾರಾಯಣ ಗೌಡ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಬೆಳಾಲು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾ ಅತ್ತಿದಡಿ, ಉಜಿರೆ ಅಂಚೆ ಇಲಾಖೆಯ ಉಪ ಅಂಚೆಪಾಲಕ ಶ್ರೀನಿವಾಸ್ ಗೌಡ ಗಣಪನಗುತ್ತು, ಸುದ್ದಿ ಬಿಡುಗಡೆಯ ಸಹಾಯಕ ವ್ಯವಸ್ಥಾಪಕ ಜಾರಪ್ಪ ಪೂಜಾರಿ, ಶಾಲಾ ಮುಖ್ಯಶಿಕ್ಷಕಿ ವಿಜಯ, ಚಿತ್ತಾರ ಗೆಳೆಯರ ಬಳಗದ ಗೌರವ ಅಧ್ಯಕ್ಷ ಸೀತಾರಾಮ ಸೌರಭ, ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಚಿತ್ತಾರ ಗೆಳೆಯರ ಬಳಗದ ಅಧ್ಯಕ್ಷ ಬೆಳಿಯಪ್ಪ ಗೌಡ ಸ್ವಾಗತಿಸಿ, ಕಾರ್ಯದರ್ಶಿ ದಿನೇಶ್ ಕರ್ಪುದಗುಡ್ಡೆ ವಂದಿಸಿದರು.ಗಿರೀಶ್ ಮಂಜೊತ್ತು ನಿರೂಪಿಸಿದರು.

ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೀತಾರವರನ್ನು ಗೌರವಿಸಲಾಯಿತು. ತೀರ್ಪುಗಾರ ಶ್ರೀ ಧ.ಮ.ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದ ಶಾರೀರಿಕ ನಿರ್ದೇಶಕ ಧರ್ಮೇಂದ್ರ ಕುಮಾರ್, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ಸಂತೋಷ ಮಡಿವಾಳ, ಚಿತ್ತಾರ ಗೆಳೆಯರ ಬಳಗ ಪದಾಧಿಕಾರಿಗಳು, ಸದಸ್ಯರು ಊರವರು ಹಾಜರಿದ್ದರು, ಅನಂತರ ವಿವಿಧ ಆಟೋಟ ಸ್ಪರ್ಧೆಗಳು ಜರಗಿತು.

Exit mobile version