Site icon Suddi Belthangady

ಬೆಳಾಲು: ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿಯ ಆಶ್ರಯದಲ್ಲಿ ನಡೆಯುವ 41ನೇ ವರ್ಷದ ಕ್ರೀಡಾಕೂಟದ ಆಮಂತ್ರಣ ಬಿಡುಗಡೆ

ಬೆಳಾಲು : ಶ್ರೀ ಮಾಯ ಮಹೇಶ್ವರ ಭಜನಾ ಮಂಡಳಿ ಮಾಯ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.15ರಂದು ನಡೆಯುವ 41ನೇ ವರ್ಷದ ಕ್ರೀಡಾ ಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆ ಅ.26ರಂದು ಶ್ರೀ ಮಾಯ ಮಹಾದೇವ ದೇವಸ್ಥಾನದಲ್ಲಿ ನಡಯಿತು.

ಮಾಯಗುತ್ತು ಪುಷ್ಪದಂತ ಜೈನ್ ಬಿಡುಗಡೆಗೊಳಿಸಿದರು.

ದೇವಸ್ಥಾನದ ಅರ್ಚಕ ಕೇಶವ ರಾಮಯಾಜಿ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ರಾಜಪ್ಪ ಗೌಡ, ದಿನೇಶ್ ಎಂ.ಕೆ., ಸುಕನ್ಯಾ ನಾರಾಯಣ ಸುವರ್ಣ, ಶೇಖರ ಗೌಡ ಕೊಲ್ಲಿಮಾರು, ಮಾಯ ಫ್ರೆಂಡ್ಸ್ ಅಧ್ಯಕ್ಷ ರಾಧಾಕೃಷ್ಣ ಗೌಡ, ಭಜನಾ ಮಂಡಳಿಯ ಅಧ್ಯಕ್ಷ ಹರೀಶ್ ಆಚಾರ್ಯ, ಕಾರ್ಯದರ್ಶಿ ಶಿವಪ್ರಸಾದ್, ಉಪಾಧ್ಯಕ್ಷ ಶಶಿಧರ ಕೆ., ಜತೆ ಕಾರ್ಯದರ್ಶಿ ಶೋಭಿತ್, ಕ್ರೀಡಾ ಸಮಿತಿಯ ಸಹ ಸಂಚಾಲಕ ರಂಜನ್ ಕುಮಾರ್, ಭಜನಾ ಸಂಚಾಲಕಿ ಭವಾನಿ ಮಾರ್ಪಲು, ಮಹಿಳಾ ಸಂಚಾಲಕಿ ಸುಜಾತಾ ಮಂಜುಶ್ರೀ, ಲಲಿತಾ ಮೋನಪ್ಪ ಗೌಡ, ಭಜನಾ ಮಂಡಳಿ ಸದಸ್ಯರು ಹಾಜರಿದ್ದರು.

Exit mobile version