Site icon Suddi Belthangady

ಮಿತ್ತಬಾಗಿಲು ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಗ್ರಾಮ ಸಭೆ

ಮಿತ್ತಬಾಗಿಲು: ಗ್ರಾಮ ಪಂಚಾಯತ್ ಕಛೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾಮಗಾರಿಯ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆಯು, ಉದ್ಯೋಗ ಖಾತರಿ ಯೋಜನೆಯ ಮಾಹಿತಿ ಕಾರ್ಯಗಾರ ಮತ್ತು ಬಿ ಕೆ ದೇವರಾವ್ ರಾಷ್ಟ್ರ ಪ್ರಶಸ್ತಿ ವಿಜೇತರು, ಜಯಕೀರ್ತಿ ಹೆಚ್ ಬಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸುಂದರ ಕೆ ನಿವೃತ ನೌಕರರ ರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಸದ್ರಿ ವಿಶೇಷ ಗ್ರಾಮ ಸಭೆಯಲ್ಲಿ ವಿನಯಚಂದ್ರ ಅಧ್ಯಕ್ಷರು, ವಿಜಯ ಮತ್ತು ಸರ್ವ ಸದಸ್ಯರು, ಮೋಹನ ಬಂಗೇರ ಕೆ ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಂಚಾಯತ್ ಸಿಬ್ಬಂದಿ ವರ್ಗದವರು, ತಾಲೂಕು ಸಹಾಯಕ ಅಭಿಯಂತರರು ರೇಷ್ಮಾ ರಾಜ್, ವಿನಿಷಾ ತಾಲೂಕು ಐಇಸಿ ಸಂಯೋಜಕರು, ಗ್ರಂಥಾಲಯ ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Exit mobile version