ಬೆಳ್ತಂಗಡಿ: ಸ.ಪ್ರ.ದ.ಕಾಲೇಜಿನಲ್ಲಿ ಹದಿಹರೆಯ ಮತ್ತು ಆರೋಗ್ಯ ಕಾರ್ಯಕ್ರಮ

0

ಬೆಳ್ತಂಗಡಿ: ಅ.26ರಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬೆಳ್ತಂಗಡಿಯಲ್ಲಿ ಹದಿಹರೆಯ ಮತ್ತು ಆರೋಗ್ಯ ಕಾರ್ಯಕ್ರಮವನ್ನು ಆಯೋಜಿಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ. ಎನ್ ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಗಳಾಗಿ ರಮ್ಯ, ಸಮಾಲೋಚಕರು, SKRK ಸರ್ಕಾರಿ ಆಸ್ಪತ್ರೆ ಬೆಳ್ತಂಗಡಿ, ಆಗಮಿಸಿದ್ದರು.

ರಮ್ಯಾ ರವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಯಂ ಅರಿವು, ಹದಿಹರೆಯದವರ ಆರೋಗ್ಯದ ಕಾಳಜಿಯ ಪ್ರಾಮುಖ್ಯತೆಯನ್ನು ತಿಳಿಸಿದರು.ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಪ್ರಶ್ನೆಗಳಿಗೆ ಉತ್ತರಿಸಿದರು.

ಈ ಕಾರ್ಯಕ್ರಮದಲ್ಲಿ ಪ್ರೊಫೆಸರ್ ಪದ್ಮನಾಭ ಕೆ, ಪ್ರೊಫೆಸರ್ ಸುರೇಶ್ ವಿ ಹಾಗೂ ಪ್ರೊಫೆಸರ್ ರಾಜೇಶ್ವರಿ ಉಪಸ್ಥಿತರಿದ್ದರು.ಕುಮಾರಿ ಸ್ವಾತಿ ಎಲ್ಲರನ್ನ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.ಕುಮಾರಿ ವನಿತಾ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here