ಹರೀಶ್ ಪೂಂಜ ಇನ್ನೂ ರಾಜಕೀಯದಲ್ಲಿ ಬಚ್ಚಾ-ಸಿ.ಎಂ. ಸಿದ್ದರಾಮಯ್ಯ

0

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಇನ್ನೂ ರಾಜಕೀಯದಲ್ಲಿ ಬಚ್ಚಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಉಡುಪಿಯಲ್ಲಿ ನಡೆಯುತ್ತಿರುವ ವಿಶ್ವ ಬಂಟರ ಸಮ್ಮೇಳನದಲ್ಲಿ ಭಾಗವಹಿಸಲು ಅ.28ರಂದು ಆಗಮಿಸಿದ್ದ ಸಿದ್ದರಾಮಯ್ಯರವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ ರಾಜ್ಯದ ನಿಗಮ, ಮಂಡಳಿಗಳಿಗೆ ಶೀಘ್ರವೇ ನೇಮಕ ನಡೆಸಲಾಗುವುದು ಎಂದು ತಿಳಿಸಿದರು.ಸೌಜನ್ಯ ಪ್ರಕರಣದ ತನಿಖೆಯನ್ನು ಸಿಬಿಐನವರು ನಡೆಸಿರುವುದರಿಂದ ಮುಂದೆ ಮೇಲ್ಮನವಿ ಸಲ್ಲಿಸಬೇಕಾ ಅಥವಾ ಮರು ತನಿಖೆಗೆ ಆದೇಶಿಸಬೇಕಾ ಎಂಬ ತೀರ್ಮಾನವನ್ನು ಕೇಂದ್ರ ಸರಕಾರ ಕೈಗೊಳ್ಳಬೇಕು ಎಂದು ಹೇಳಿದರು.

ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಲೆಕ್ಷನ್ ಮಾಸ್ಟರ್ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿ ಕೇಸ್‌ಗೆ ಒಳಗಾಗಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ಕುರಿತಾಗಿ ಮಾಧ್ಯಮದವರು ಪ್ರಶ್ನಿಸಿದಾಗ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಪ್ರತಿಕ್ರಿಯಿಸಿ ನಾನು 1983ರಲ್ಲಿ ಶಾಸಕನಾಗಿ ನಂತರ ಸಚಿವನಾದವನು.ಆವಾಗ ಯಾರೂ ನನ್ನನ್ನು ಆ ರೀತಿ ಕರೆದಿಲ್ಲ.ಹರೀಶ್ ಪೂಂಜ ನಿನ್ನೆ ಮೊನ್ನೆ ಬಂದವನು.ಪಾಪ ಇನ್ನೂ ರಾಜಕೀಯದಲ್ಲಿ ಬಚ್ಚ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here