ನ.4: ಬೆಳ್ತಂಗಡಿ ಶ್ರೀ ಗುರುದೇವ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ

0

ಬೆಳ್ತಂಗಡಿ: ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ, ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಘಟಕ ಇದರ ಜಂಟಿ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರ ನ.4 ರಂದು ಶ್ರೀ ಗುರುದೇವ ಪ.ಪೂ ಕಾಲೇಜ್ ನಲ್ಲಿ ಜರುಗಲಿದೆ.

ಶಿಬಿರದ ಉದ್ಘಾಟನೆಯನ್ನು ಶ್ರೀ ಗುರುದೇವ ಎಜುಕೇಶನಲ್ ಟ್ರಸ್ಟ್ ನ ಅಧ್ಯಕ್ಷ, ಮಾಜಿ ಶಾಸಕ ವಸಂತ ಬಂಗೇರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಅಧ್ಯಕ್ಷ ಹರಿದಾಸ್ ಎಸ್.ಎಂ, ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ, ಸಂಶೋಧನಾ ಸಂಘ (ನಿ) ಅಧ್ಯಕ್ಷ ಶಿವಕುಮಾರ್ ಎಸ್.ಎಂ, ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ ಕಾರ್ಯದರ್ಶಿ ಯಶವಂತ ಪಟವರ್ಧನ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಸವಿತಾ, ಶ್ರೀ ಗುರುದೇವ ಪ.ಪೂ ಕಾಲೇಜ್ ನ ಪ್ರಾಂಶುಪಾಲ ಸುಕೇಶ್, ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜ್ ನ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿ ಬಿ.ಎ ಶಮಿಯುಲ್ಲಾ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಘಂಟೆ ತನಕ ರಕ್ತದಾನ ಶಿಬಿರ ನಡೆಯಲಿದ್ದು, ಯುವಕ/ ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ರಕ್ತದಾನ ಮಾಡಬೇಕು.ರಕ್ತದಾನದಿಂದ ಇನ್ನೊಂದು ಜೀವವನ್ನು ಉಳಿಸಿದ ಸಾರ್ಥಕತೆ ಇರುತ್ತದೆ ಎಂದು ಸಂಘಟಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here