ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದಿಂದ ಆರೋಗ್ಯ ಇಲಾಖೆ ನೌಕರರಿಗೆ ಉಚಿತ ಸಮವಸ್ತ್ರ ವಿತರಣೆ

0

ಬೆಳ್ತಂಗಡಿ: ಅ.30ರಂದು ಬೆಳ್ತಂಗಡಿ ತಾಲೂಕಿನ ಆರೋಗ್ಯ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ 46 ಜನ ಡಿ ದರ್ಜೆ ನೌಕರರಿಗೆ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ಬೆಳ್ತಂಗಡಿ ಇದರ ವತಿಯಿಂದ ಸಮವಸ್ತ್ರಗಳನ್ನು ಉಚಿತವಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆಯಿಂದ ನಿವೃತ್ತಿಯಾಗುತ್ತಿರುವ ಕಮಲ ಹಾಗೂ ವರ್ಗಾವಣೆಯಾದ ಬಿ.ರಶ್ಮಿ ಅವರನ್ನು ಗೌರವಿಸಲಾಯಿತು.ಸಹಕಾರಿ ಸಂಘದ ಅಧ್ಯಕ್ಷ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಬೆಂಗಳೂರು ಇದರ ಜಂಟಿ ಕಾರ್ಯದರ್ಶಿ ಜಯಕೀರ್ತಿ ಜೈನ್, ಸಮುದಾಯ ಆರೋಗ್ಯ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್, ಸಹಕಾರಿ ಸಂಘದ ಉಪಾಧ್ಯಕ್ಷ ಚಿದಾನಂದ ಹೂಗಾರ್, ನಿರ್ದೇಶಕರಾದ ಚಂದ್ರಶೇಖರ್, ಅಬ್ದುಲ್ ರಝಕ್, ಸಲಹೆಗಾರರಾದ ವಸಂತ ಸುವರ್ಣ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವತ್ಸಲ ಜ್ಯೋತಿರಾಜ್, ಸಹಕಾರಿ ಸಂಘದ ನಿರ್ದೇಶಕರು, ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here