ಮಿಜಾರುಗುತ್ತು ಆನಂದ ಆಳ್ವರ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

0

ಉಜಿರೆ: ಮಿಜಾರುಗುತ್ತು ಶ್ರೀ ಆನಂದ ಆಳ್ವರ ನಿಧನದಿಂದ ದುಃಖವಾಗಿದೆ.ಅವರ ಸರಳ ಹಾಗೂ ಆದರ್ಶ ವ್ಯಕ್ತಿತ್ವ ನಮ್ಮ ಜಿಲ್ಲೆಯಲ್ಲಿ ಸದಾ ಸ್ಮರಣೀಯವಾಗಿದೆ.ಪ್ರಗತಿಪರ ಕೃಷಿಕರಾಗಿ ಅವರು ಕೃಷಿ ರಂಗದಲ್ಲಿ ಉನ್ನತ ಸಾಧನೆ ಮಾಡಿದ್ದಾರೆ.

ಗೋವುಗಳ ಬಗ್ಯೆ ಅವರಿಗೆ ವಿಶೇಷ ಪ್ರೀತಿ, ಕಾಳಜಿ ಇತ್ತು. ಧರ್ಮಸ್ಥಳಕ್ಕೆ ಬಂದಾಗಲೆಲ್ಲ ಅವರು ಇಲ್ಲಿರುವ ಗೋ ಶಾಲೆಗೆ ಹೋಗಿ ಗೋವುಗಳ ಬಗ್ಯೆ ವಿಶೇಷ ಕಾಳಜಿ ವ್ಯಕ್ತಪಡಿಸುತ್ತಿದ್ದರು.1970ರ ದಶಕದಲ್ಲಿ ಅನೇಕ ಉದ್ಯಮಗಳನ್ನು ಅವರು ಪ್ರಾರಂಭಿಸಿ ಯುವ ಜನತೆಯನ್ನು ಪ್ರೋತ್ಸಾಹಿಸಿದರು.

ತಮ್ಮ ಎಲ್ಲಾ ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಿಶ್ವಾಸದಿಂದ ಶಿಸ್ತುಬದ್ಧವಾಗಿ, ಸಭ್ಯ, ಸುಸಂಸ್ಕೃತ ನಾಗರಿಕರಾಗಿ ರೂಪಿಸಿದ್ದಾರೆ.
ಶಿಕ್ಷಣ ರಂಗದಲ್ಲಿ ಅವರ ಮಗ ಡಾ. ಮೋಹನ ಆಳ್ವರ ಸೇವೆ-ಸಾಧನೆ ಶ್ಲಾಘನೀಯವಾಗಿದೆ.

ಆನಂದ ಆಳ್ವರ ನಿಧನದಿಂದ ನನಗೆ ಅತೀವ ದುಃಖವಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ. ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಡಿ. ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here