Site icon Suddi Belthangady

ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಭೌಗೋಳಿಕವಾಗಿ, ಪ್ರಾದೇಶಿಕವಾಗಿ ವೈಶಿಷ್ಟ್ಯತೆಯನ್ನು ಹೊಂದಿರುವ ಕರ್ನಾಟಕವು ನಾಡು ನುಡಿ ಸಾಹಿತ್ಯದ ದೃಷ್ಟಿಯಿಂದ ಭಾರತ ದೇಶದಲ್ಲಿಯೇ ಅತ್ಯುನ್ನತ ಸ್ಥಾನವನ್ನು ಹೊಂದಿದೆ ಎಂದು ವಾಣಿ ಶಿಕ್ಷಣ ಸಂಸ್ಥೆ೦ ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಹೇಳಿದರು.

ಅವರು ವಾಣಿ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಜರುಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡುತ್ತಾ, ಕನ್ನಡ ಭಾಷೆ, ಸಾಹಿತ್ಯದ ಅಭಿರುಚಿ ಹಾಗೂ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.

ವಾಣಿ ಶಿಕ್ಷಣ ಸಂಸ್ಥೆಯ ಪ್ರಧಾನ ಕಾರರ್ಯದರ್ಶಿ ಗಣೇಶ್ ಗೌಡ, ಆಡಳಿತಾಧಿಕಾರಿ ಪ್ರಸಾದ್ ಕುಮಾರ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ.ಯದುಪತಿ ಗೌಡ, ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ, ವಾಣಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ, ವಾಣಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸುಹಾಸಿನಿ, ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Exit mobile version