Site icon Suddi Belthangady

ಗೇರುಕಟ್ಟೆ ಕೊರಂಜ ಉನ್ನತೀಕರಿಸಿದ ಹಿ.ಪ್ರಾ.ಶಾಲೆಯ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ದೀಪ್ತಿ ಬಿ.ಎಸ್. ನೇಮಕ

ಬೆಳ್ತಂಗಡಿ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ 2022-23ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳಿಗೆ ಆಯ್ಕೆಯಾದ ಪದವೀಧರ ಪ್ರಾಥಮಿಕ ಶಿಕ್ಷಕರ(6ರಿಂದ 8ನೇ ತರಗತಿ)ನ್ನು ವಿವಿಧ ಶಾಲೆಗಳಿಗೆ ನೇಮಕಾತಿ ಮಾಡಿ ಆದೇಶ ಹೊರಡಿಸಿದೆ.ಅದರಂತೆ ದೀಪ್ತಿ ಬಿ.ಎಸ್.ಅವರು ಬೆಳ್ತಂಗಡಿ ತಾಲೂಕಿನ ಗೇರುಕಟ್ಟೆ ಕೊರಂಜ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪದವೀಧರ ಪ್ರಾಥಮಿಕ ಶಿಕ್ಷಕಿಯಾಗಿ ಆಯ್ಕೆಯಾಗಿದ್ದು ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ಪುತ್ತೂರು ತಾಲೂಕಿನ 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ನಿವಾಸಿ ಶೇಖರ ಬಿ.ಅವರ ಪುತ್ರಿಯಾಗಿರುವ ದೀಪ್ತಿ ಬಿ.ಎಸ್. ಅವರು 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆ, ಕೋಡಿಂಬಾಡಿ ಶಾಂತಿನಗರ ಸರಕಾರಿ ಪ್ರೌಢಶಾಲೆ, ಕೊಂಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು ಮತ್ತು ಪುತ್ತೂರು ಸಂತಫಿಲೋಮಿನಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದು ಪುತ್ತೂರು ವಿವೇಕಾನಂದ ಬಿ.ಎಡ್. ಕಾಲೇಜಿನಲ್ಲಿ ಬಿ.ಎಡ್. ಪೂರೈಸಿದ್ದರು. ಪ್ರಸ್ತುತ ದೀಪ್ತಿ ಬಿ.ಯಸ್.ಅವರು ಕಡಬ ತಾಲೂಕಿನ ರಾಮಕುಂಜದ ಶಾರದಾನಗರದಲ್ಲಿ ಪತಿ ವಾಸಪ್ಪ ಅವರೊಂದಿಗೆ ವಾಸ್ತವ್ಯವಿದ್ದಾರೆ.

Exit mobile version