ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

0

ಬೆಳ್ತಂಗಡಿ: ಸಹಕಾರ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಗುರುತಿಸಿ ಶ್ರೀ ಗುರುದೇವ ವಿವಿಧೋದೇಶ ಸಹಕಾರ ಸಂಘಕ್ಕೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರ ಪರವಾಗಿ ಉಪಾಧ್ಯಕ್ಷ ಭಗೀರಥ ಜಿ ಇವರಿಗೆ ಜಿಲ್ಲಾ ಉಸ್ತುವಾರಿ ಸಚಿವರೂ, ಆರೋಗ್ಯ ಸಚಿವರಾಗಿರುವ ದಿನೇಶ್ ಗುಂಡೂರಾವ್ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್, ಶಾಸಕ ವೇದವ್ಯಾಸ್ ಕಾಮತ್, ಮೇಯರ್ ಸುಧೀರ್ ಶೆಟ್ಟಿ, ಜಿಲ್ಲಾಧಿಕಾರಿಯಾದ ಮುಲೈ ಮುಹಿಲನ್, ಸಂಘದ ನಿರ್ದೇಶಕರಾದ ಸಂಜೀವ ಪೂಜಾರಿ, ಜಗದೀಶ್ಚಂದ್ರ ಡಿ.ಕೆ, ಧರಣೇಂದ್ರ ಕುಮಾರ್, ವಿಶೇಷಾಧಿಕಾರಿ ಮೋನಪ್ಪ ಪೂಜಾರಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ಅಶ್ವತ್ಥ್ ಕುಮಾರ್, ಶಾಖಾ ವ್ಯವಸ್ಥಾಪಕರುಗಳು ಹಾಗೂ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here