Site icon Suddi Belthangady

ಬಳಂಜ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

ಬಳಂಜ: ರಾಷ್ಟ್ರ ಮಟ್ಟದ ಕುಣಿತ ಭಜನಾ ಸ್ಪರ್ಧೆಯಲ್ಲಿ ಭಾಗವಹಿಸಿ ಹೆಸರನ್ನು ಪಡೆದಿರುವ ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯನ್ನು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿರುವ ಶ್ರೀ ಗಂಗಾಂಬಿಕ ದೇವಸ್ಥಾನದಲ್ಲಿ ನವಂಬರ್ 6 ರಂದು ನಡೆಯುವ 20ನೇ ವರ್ಷದ ಗಂಗಾಷ್ಟಮಿ ಉತ್ಸವದ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಕುಣಿತ ಭಜನೆಯನ್ನು ನೀಡಲು ಅಲ್ಲಿನ ಆಡಳಿತ ಮಂಡಳಿಯವರು ಆಹ್ವಾನವನ್ನು ನೀಡಿದ್ದಾರೆ.

ಈ ಕುರಿತು ಸುದ್ದಿ ಬಿಡುಗಡೆ ಪತ್ರಿಕೆಗೆ ಮಾಹಿತಿಯನ್ನು ನೀಡಿರುವ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ರವರು ನಮ್ಮ ಮಂಡಳಿಯ ಎಲ್ಲಾ ಸದಸ್ಯರ ಉತ್ತಮ ಪಾಲ್ಗೊಳ್ಳುವಿಕೆಯಿಂದ ಎಲ್ಲಾ ಕಡೆಗಳಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಿಗೆ ಆಮಂತ್ರಿಸುತ್ತಿದ್ದು ದೂರದ ಉತ್ತರ ಕನ್ನಡ ಜಿಲ್ಲೆಯವರು ನಮ್ಮ ಮಂಡಳಿಯನ್ನು ಗುರುತಿಸಿ ಅಲ್ಲಿನ ಹೆಸರಾಂತ ದೇವಸ್ಥಾನದಲ್ಲಿ ನಡೆಯುವ ಉತ್ಸವಕ್ಕೆ ಆಹ್ವಾನಿಸಿರುವುದು ತುಂಬಾ ಖುಷಿಯಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Exit mobile version