Site icon Suddi Belthangady

ಬೆಳಾಲು: ಅನಂತೋಡಿ ಅನಂತ ಪದ್ಮನಾಭ ದೇವಸ್ಥಾನದ ಜಾತ್ರೋತ್ಸವದ ಪೂರ್ವಭಾವಿ ಸಭೆ- ಜಾತ್ರೋತ್ಸವ ಸಮಿತಿ ಪ್ರಧಾನ ಸಂಚಾಲಕರಾಗಿ ದೇಜಪ್ಪ ಗೌಡ ಅರಣೆಮಾರು

ಬೆಳಾಲು: ಇಲ್ಲಿಯ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಡಿ.25 ಮತ್ತು 26 ರಂದು ನಡಯಲಿದ್ದು ಇದರ ಅಂಗವಾಗಿ ಸಮಾಲೋಚನಾ ಸಭೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೋಟರಿ ವಕೀಲ ಶ್ರೀನಿವಾಸ ಗೌಡರ ಅಧ್ಯಕ್ಷತೆಯಲ್ಲಿ ದೇವಸ್ಥಾನದಲ್ಲಿ ಜರಗಿತು.

ಸಭೆಯಲ್ಲಿ ಜಾತ್ರೋತ್ಸವದ ಪ್ರಧಾನ ಸಂಚಾಲಕರಾಗಿ ದೇಜಪ್ಪ ಗೌಡ ಅರಣೆಮಾರು ಇವರನ್ನು ಆಯ್ಕೆ ಮಾಡಲಾಯಿತು.ಹಾಗೂ ಜಾತ್ರೋತ್ಸವದ ಯಶಸ್ವಿಗೆ ವಿವಿಧ ಉಪ ಸಮಿತಿಗಳನ್ನು ರಚಿಸಲಾಯಿತು.

ಸಭೆಯಲ್ಲಿ ದೇವಸ್ಥಾನದ ಆಸ್ರಣ್ಣ ಗಿರೀಶ್ ಬಾರಿತ್ತಾಯ ಪಾರಳ, ವ್ಯವಸ್ಥಾಪನಾ ಸಮಿತಿಯ ಉಪಾಧ್ಯಕ್ಷೆ ಮಮತಾ ದಿನೇಶ್ ಪೂಜಾರಿ ಉಪ್ಪಾರು, ಜಾತ್ರೋತ್ಸವ ಸಮಿತಿಯ ನಿಕಟ ಪೂರ್ವ ಸಂಚಾಲಕರುಗಳಾದ ದೇಜಪ್ಪ ಗೌಡ ಎಳ್ಳುಗದ್ದೆ, ಎನ್.ಜತ್ತಣ್ಣ ಗೌಡ, ಮಹಿಳಾ ಸಮಿತಿಯ ಅಧ್ಯಕ್ಷೆ ಹೇಮಲತಾ ಶ್ರೀನಿವಾಸ್ ಗೌಡ ಗಣಪನ ಗುತ್ತು, ಭಜನಾ ಮಂಡಳಿಯ ಅಧ್ಯಕ್ಷ ನವೀನ್ ಗೌಡ ಕಂಬಳದಡ್ಡ ಉಪಸ್ಥಿತರಿದ್ದರು.

ವ್ಯವಸ್ಥಾಪನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ದುರ್ಗಾಪ್ರಸಾದ್ ಕೆರ್ಮುಣ್ಣಾಯ ಸ್ವಾಗತಿಸಿ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ ವಂದಿಸಿದರು.ಗಿರೀಶ್ ಮಂಜೊತ್ತು ನಿರೂಪಿಸಿದರು.

ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ, ಬೈಲುವಾರು ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಅನಂತತೇಶ್ವರ ಭಜನಾ ಮಂಡಳಿ, ಅನಂತೇಶ್ವರ ಫ್ರೆಂಡ್ಸ್ ಪದಾಧಿಕಾರಿಗಳು, ಊರ ಭಕ್ತರು ಹಾಜರಿದ್ದರು.

Exit mobile version