ಬಿಸಿಯೂಟ ಸಿಬ್ಬಂದಿಗಳ ಮುಷ್ಕರದ ಹಿನ್ನಲೆ ವಿದ್ಯಾರ್ಥಿಗಳಿಗೆ ಊಟದ ವ್ಯವಸ್ಥೆ ಕಲ್ಪಿಸಿದ ಸಮಾಜ ಸೇವಕ ಸಂತೋಷ್ ಪೂಜಾರಿ ನಿನ್ನಿಕಲ್ಲು

0

ಅಳದಂಗಡಿ: ಸರ್ಕಾರಿ ಶಾಲೆಗಳ ಬಿಸಿಯೂಟ ಸಿಬ್ಬಂದಿಗಳ ಮುಷ್ಕರ ಹೋರಾಟದ ಪರಿಣಾಮವಾಗಿ ಇಂದು ಶಾಲಾ ವಿದ್ಯಾರ್ಥಿಗಳು ಮನೆಯಿಂದಲೇ ಊಟದ ವ್ಯವಸ್ಥೆ ಮಾಡಿಕೊಂಡಿದ್ದಾರೆ.ಆದರೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬಡಗಕಾರಂದೂರು ಇಲ್ಲಿ ಸಮಾಜಸೇವಕ, ಶಾಲಾ ಎಸ್ ಡಿ ಎಂ ಸಿ ಸದಸ್ಯ ಸಂತೋಷ್ ನಿನ್ನಿಕಲ್ಲುರವರು ಸ್ವಯಂ ಪ್ರೇರಿತರಾಗಿ ತನ್ನ ಸಂಸ್ಥೆಯ ಸಿಬ್ಬಂದಿಗಳ ತಂಡವನ್ನು ಕಟ್ಟಿಕೊಂಡು ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲೇ ಅಡುಗೆ ತಯಾರಿಸಿ ಊಟದ ವ್ಯವಸ್ಥೆ ಕಲ್ಪಿಸಿ ಎಲ್ಲರಿಗೂ ಮಾದರಿ ಅನಿಸಿಕೊಂಡಿದ್ದಾರೆ.

ಸರ್ಕಾರಿ ಶಾಲೆಗಳ ಮೇಲೆ ಅಪಾರ ಕಾಳಜಿ ಹೊಂದಿರುವ ಇವರು ಅನೇಕ ಸರ್ಕಾರಿ ಶಾಲೆಗಳಿಗೆ ನಿರಂತರವಾಗಿ ನೆರವು ನೀಡುತ್ತಿದ್ದಾರೆ.

LEAVE A REPLY

Please enter your comment!
Please enter your name here