ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಸೈಕಲ್ ಯಾತ್ರೆ ಕೈಗೊಂಡ ಮಾಜಿ ಸಚಿವ ಹಾಗು ರಾಜಾಜಿನಗರದ ಶಾಸಕ ಸುರೇಶ ಕುಮಾರ್

0

ಉಜಿರೆ:ಬೆಂಗಳೂರಿನಿಂದ ಶ್ರೀ  ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಸಚಿವ ಹಾಗು ರಾಜಾಜಿನಗರದ ಶಾಸಕ ಸುರೇಶ ಕುಮಾರ್ ಅವರು ಸೈಕಲ್ ಯಾತ್ರೆ ಕೈಗೊಂಡು  ಧರ್ಮಸ್ಥಳದಲ್ಲಿ  ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ನ.8ರಂದು ಮುಂಜಾನೆ ಬೆಂಗಳೂರಿನಿಂದ ಹೊರಟ ಅವರು ನ.10ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ತನ್ನ ಸೈಕಲ್ ಯಾತ್ರೆಯನ್ನು ಸಮಾಪ್ತಿಗೊಳಿಸಿದ್ದಾರೆ.

ದಿ ರಾಜಾಜಿನಗರ ಪೆಡಲ್ ಪವರ್ ತಂಡದ ಮೂಲಕ ಎಂಟು ಜನ ಸಹಸವಾರರ ಜತೆಗೆ ಮೂರು ದಿನಗಳ  ಸೈಕಲ್ ಯಾತ್ರೆಯನ್ನು  ಯಶಸ್ವಿಯಾಗಿ ಪೂರೈಸಿದ ಶಾಸಕ ಸುರೇಶ ಕುಮಾರ್ ಶ್ರೀ ಕ್ಷೇತ್ರ ಧರ್ಮಸ್ಥಳ ತಲುಪಿ ಶ್ರೀ ಸ್ವಾಮಿಯ ಸೇವೆ ಗೈದಿದ್ದಾರೆ.

ಸುರೇಶ ಕುಮಾರ್ ಜತೆಗೆ ಅಯ್ಯಪ್ಪ,ಸಾಗರ್ ನಾಯ್ಡು, ಹರೀಶ್, ರಾಘವ್, ದಿವಾಕರ್, ಮೋಹನ್, ಬಾಲು ಮತ್ತು ಕಿರಣ್ ಸಹಸವಾರರಾಗಿ ಪಾಲ್ಗೊಂಡಿದ್ದರು.

2014ರ ನವೆಂಬರ್ ನಲ್ಲಿ  ಶಾಸಕ ಸುರೇಶ್ ಕುಮಾರ್ ಎಂಟು ದಿನಗಳ  ಕಾಲ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯುತ್ರೆ  ಮೂಲಕ  ಸಾಗಿ ಬಂದಿದ್ದರು.

LEAVE A REPLY

Please enter your comment!
Please enter your name here