ಸಿರಿ ಸಂಸ್ಥೆಯ ಎಂ.ಡಿ.ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

0

ಉಜಿರೆ: ಉದ್ಯಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಮಾಡಿರುವ ಉನ್ನತ ಸಾಧನೆಯನ್ನು ಗುರುತಿಸಿ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ಧನರವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ.

ಈ ನಿಟ್ಟಿನಲ್ಲಿ ಸಿರಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗಳ ವತಿಯಿಂದ ಸಿರಿ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್.ಜನಾರ್ಧನ ರವರಿಗೆ ಅಭಿನಂದನಾ ಕಾರ್ಯಕ್ರಮ ನ.10ರಂದು ಉಜಿರೆ ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು.

ಸಿರಿ ಸಂಸ್ಥೆಯ ಆಡಳಿತ ನಿರ್ದೇಶಕರಾದ ಪ್ರಸನ್ನ ಯು ರವರು ಪ್ರಾಸ್ತಾವಿಕವಾಗಿ ಮಾತನಾಡಿ, ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರ ಆಶ್ರಯದಲ್ಲಿ ಸ್ತೀ ಸಬಲೀಕರಣದ ಧ್ಯೇಯೋದ್ದೇಶದೊಂದಿಗೆ ಉದ್ಯಮ ಕ್ಷೇತ್ರದಲ್ಲಿ ವಿಶೇಷ ಸಾಧನೆಯನ್ನು ಮಾಡಲು ಉತ್ತಮ ಸಲಹೆ, ಮಾರ್ಗದರ್ಶನವನ್ನು ನೀಡುವ ಮೂಲಕ ಸಿರಿ ಸಂಸ್ಥೆಯನ್ನು ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಲು ಕಾರಣೀಕರ್ತರಾದ ಸಿರಿ ಎಂ.ಡಿ ಶ್ರೀಯುತ ಕೆ.ಎನ್.ಜನಾರ್ಧನ ರವರಿಗೆ ಎಲ್ಲಾ ಸಿರಿ ಸಿಬ್ಬಂದಿಗಳ ಪರವಾಗಿ ಪ್ರೀತಿಪೂರ್ವಕವಾಗಿ ಗೌರವಿಸಿ, ಅಭಿನಂದನೆ ಸಲ್ಲಿಸಿದರು.

ಸಿರಿ ಎಂ.ಡಿ ಕೆ.ಎನ್.ಜನಾರ್ಧನ ರವರು ಸಿರಿ ಸಂಸ್ಥೆಯು ಈ ಉನ್ನತ ಸಾಧನೆಯನ್ನು ಮಾಡುವಲ್ಲಿ ಶ್ರಮಿಸಿರುವ ಎಲ್ಲಾ  ಸಿರಿ ಸಿಬ್ಬಂದಿಗಳಿಗೆ ಆಭಾರ ವ್ಯಕ್ತಪಡಿಸಿದರು ಹಾಗೂ ಎಲ್ಲಾ ಸಿಬ್ಬಂದಿಗಳಿಗೆ ಪೂಜ್ಯರು ದಯಪಾಲಿಸಿದ ದೀಪೋತ್ಸವ ಉಡುಗೊರೆಯನ್ನು ವಿತರಿಸಿ, ಶುಭ ಹಾರೈಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಸಿರಿ ಗೋದಾಮು ಪ್ರಬಂದಕರಾದ ಜೀವನ್ ಕುಮಾರ್ ರವರು ಕಾರ್ಯಕ್ರಮ ನಿರೂಪಿಸಿ, ಧನ್ಯವಾದವಿತ್ತರು.ಎಲ್ಲಾ ಸಿರಿ ಸಿಬ್ಬಂದಿಗಳು ಸಿರಿ ಎಂ.ಡಿ ಯವರನ್ನು ಅಭಿನಂದಿಸಿ, ಸಂಭ್ರಮಪಟ್ಟರು.

LEAVE A REPLY

Please enter your comment!
Please enter your name here