Site icon Suddi Belthangady

ಬೆಳ್ತಂಗಡಿಯಲ್ಲಿ ಬಿಜೆಪಿ ಯುವ ಮೋರ್ಚಾದಿಂದ ದೀಪಾವಳಿ ದೋಸೆ ಹಬ್ಬದ ಉದ್ಘಾಟನೆ

ಬೆಳ್ತಂಗಡಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರತಿವರ್ಷ ಬಿಜೆಪಿ ಯುವಮೋರ್ಚಾದ ವತಿಯಿಂದ ನಡೆಯುವ 4 ನೇ ವರ್ಷದ ದೀಪಾವಳಿ ದೋಸೆ ಹಬ್ಬ ನ.13 ಬಸ್ ನಿಲ್ದಾಣದಲ್ಲಿ ಉದ್ಘಾಟನೆಗೊಂಡಿತು.

ಬೆಳಾಲು ಅರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಅರಿಕೋಡಿ ದೀಪ ಬೆಳಗಿಸಿ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಬೆಳ್ತಂಗಡಿ ಬಿಜೆಪಿ ಮಂಡಲ ಅಧ್ಯಕ್ಷ ಜಯಂತ ಕೋಟ್ಯಾನ್, ಮಂಗಳೂರು ಮೇಯರ್ ಮಂಡಲದ ಪ್ರಭಾರಿ ಸುಧೀರ್ ಕಣ್ಣೂರು, ಮಂಡಲದ ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ ನಾವೂರು, ಶ್ರೀನಿವಾಸ ರಾವ್, ಯುವಮೋರ್ಚ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸೂರಜ್ ಜೈನ್, ಉಪಾಧ್ಯಕ್ಷ ಸುದರ್ಶನ್ ಬಜ, ಕಾರ್ಯದರ್ಶಿ ಯತೀಶ್ ಶೆಟ್ಟಿ, ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷೆ ರಜನಿ ಕುಡ್ವ, ಮಾಜಿ ಉಪಾಧ್ಯಕ್ಷ ಜಯಾನಂದ ಗೌಡ, ಬೆಳ್ತಂಗಡಿ ಎಲ್.ಡಿ ಬ್ಯಾಂಕ್ ಅಧ್ಯಕ್ಷ ಸೋಮನಾಥ ಬಂಗೇರ ವರ್ಪಳೆ, ಯುವ ಮೋರ್ಚಾ ಪ್ರಭಾರಿ ಸೀತಾರಾಮ ಬಿ.ಎಸ್., ಯುವ ಮೋರ್ಚಾ ತಾಲೂಕು ಅಧ್ಯಕ್ಷ ಯಶವಂತ ಬೆಳಾಲು, ಪ್ರಧಾನ ಕಾರ್ಯದರ್ಶಿ ವಿನೀತ್ ಕೋಟ್ಯಾನ್, ಉಮೇಶ್ ಕುಲಾಲ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಬಿಜೆಪಿ ಮಂಡಲ, ಯುವ ಮೋರ್ಚಾದ ಪದಾಧಿಕಾರಿಗಳು, ಸದಸ್ಯರು, ಕಾರ್ಯಕರ್ತರು ಹಾಜರಿದ್ದರು.

Exit mobile version