Site icon Suddi Belthangady

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ದೀಪಾವಳಿ ಹಬ್ಬ ಆಚರಣೆ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಹಬ್ಬದ ಆಚರಣೆಯು ನಡೆಯಿತು.

ಈ ಸಂದರ್ಭದಲ್ಲಿ ನಡೆದ ಸಭೆಯ ಅಧ್ಯಕ್ಷತೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಸಂತೋಷ್ ಪಿ.ಕೋಟ್ಯಾನ್ ವಹಿಸಿ ಶುಭವನ್ನು ಹಾರೈಸಿದರು.

ಮುಖ್ಯ ಅತಿಥಿಗಳಾಗಿ ಸುದ್ದಿ ಬಿಡುಗಡೆ ಪ್ರತಿನಿಧಿ ಸದಾನಂದ ಸಾಲಿಯಾನ್ ಬಳಂಜ, ಕನ್ನಡ ಪ್ರಭ ಬೆಂಗಳೂರು ವರದಿಗಾರರಾದ ಜಗದೀಶ್ ಬಳಂಜ, ಸಮಾಜ ಸೇವಕರಾದ ಕರುಣಾಕರ ಹೆಗ್ಡೆ, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಂಡಳಿಯ ಉಪ ಸಂಚಾಲಕರಾದ ಪ್ರಣಾಮ್ ಶೆಟ್ಟಿ ಉಪಸ್ಥಿತರಿದ್ದರು.

ಮಂಡಳಿಯ ಎಲ್ಲಾ ಸದಸ್ಯರಿಗೆ ಚಪ್ಪಲಿಗಳನ್ನು ವಿತರಿಸಲಾಯಿತು.ಮಂಡಳಿಯ ಪ್ರಧಾನ ಸಂಚಾಲಕರಾದ ಹರೀಶ್ ವೈ ಚಂದ್ರಮ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರನ್ನು ಸ್ವಾಗತಿಸಿದರು.ಕುಮಾರಿ ಮಾನ್ಯ ಪ್ರಾರ್ಥಿಸಿದರು.ಭಜನಾ ಮಂಡಳಿಯ ಅಧ್ಯಕ್ಷರಾದ ಕು.ಜ್ಯೋತಿ ಧನ್ಯವಾದ ಸಲ್ಲಿಸಿದರು.ಕಾರ್ಯಕ್ರಮದ ಬಳಿಕ ಸಾರ್ವಜನಿಕ ದೀಪಾರಾದನೆ ಪಟಾಕಿ ಸಂಭ್ರಮ ನಡೆಯಿತು.

Exit mobile version