ಬೆಳ್ತಂಗಡಿ: ಸುದೆಮುಗೇರು ನೂತನ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಕಾರ್ಯಕ್ರಮ ನ.14 ರಂದು ಅಂಗನವಾಡಿ ಕೇಂದ್ರದ ವಠಾರದಲ್ಲಿ ಪಟ್ಟಣ ಪಂಚಾಯತ್ ಸದಸ್ಯ ಜಗದೀಶ್ ಬಿ.ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ನೂತನವಾಗಿ ನಿರ್ಮಾಣಗೊಂಡ ಸುದೆಮುಗೇರು ಅಂಗನವಾಡಿ ಕೇಂದ್ರಗೆ ಸಹಕರಿಸಿದ ದಾನಿಗಳಿಗೆ ಸನ್ಮಾನಿಸಲಾಯಿತು.ಪಟ್ಟಣ ಪಂಚಾಯತ್ ಪೌರ ಕಾರ್ಮಿಕರಿಗೆ ಗೌರವಾರ್ಪಣೆ ಮಾಡಲಾಯಿತು.ಬಳಿಕ ಬಹುಮಾನ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಸಿಡಿಪಿಓ ಪ್ರಿಯಾ ಆಗ್ನೇಸ್, ಮುಖ್ಯ ಅತಿಥಿ ವಿಶ್ರಾಂತ ಪ್ರಾಂಶುಪಾಲ ಪ್ರೋ ಗಣಪತಿ ಭಟ್ ಕುಳಮರ್ವ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್,ಪ.ಪಂ.ಅಭಿಯೋಜಕರಾದ ಮಹಾವೀರ ಅರಿಗ,ತಾ.ಪಂ.ವ್ಯವಸ್ಥಾಪಕ ಪ್ರಶಾಂತ್, ಪ.ಪಂ.ನಾಮ ನಿರ್ದೇಶನ ಮಾಜಿ ಸದಸ್ಯ ಮೆಹಬೂಬ್, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಲೋಕೇಶ್, ಅಂಗನವಾಡಿ ಮೇಲ್ವಿಚಾರಕಿ ಗುಲಾಬಿ ಹಾಗೂ ಅಂಗನವಾಡಿ ಕಾರ್ಯಕರ್ತೆ ದಿವ್ಯಾ ಶೇಖರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪತ್ರಕರ್ತ ಆಶ್ರಫ್ ಮುಂಡಾಜೆ ನಿರೂಪಿಸಿದರು.ಅಂಗನಾಡಿ ಸಹಾಯಕಿ ರೋಹಿಣಿ ಸಹಕರಿಸಿದರು
Home Uncategorized ಸುದೆಮುಗೇರು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಪಟ್ಟಣ ಪಂಚಾಯತ್ ಪೌರಕಾರ್ಮಿಕರಿಗೆ ಗೌರವಾರ್ಪಣೆ.