ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ.ಶಾಲೆಯಲ್ಲಿ ಪೋಷಕರ ಸಭೆ

0

ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಶಾಲಾ ವಿದ್ಯಾರ್ಥಿ ಪೋಷಕರ ಸಭೆಯನ್ನು ಕರೆಯಲಾಯಿತು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರ ಅಧ್ಯಕ್ಷತೆಯಲ್ಲಿ ಪೋಷಕರ ಸಭೆಯನ್ನು ಆಯೋಜಿಸಲಾಯಿತು.ಶಾಲೆಯ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಪೋಷಕರ ಸಭೆಯಲ್ಲಿ ಶಾಲೆಯ ಶೈಕ್ಷಣಿಕ ಗುಣಮಟ್ಟ, ಶಾಲಾ ಶೈಕ್ಷಣಿಕ ಪ್ರವಾಸ, ಶಾಲಾ ಪ್ರತಿಭಾ ದಿನಾಚರಣೆ, ಶಾಲಾ ಶ್ರಮದಾನದ ಬಗ್ಗೆ ಪೋಷಕರ ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು.

ಈ ಸಂದರ್ಭದಲ್ಲಿ ಪೋಷಕರಿಂದ ಸೂಕ್ತ ಸಲಹೆ ಸೂಚನೆಗಳನ್ನು ಪಡೆದುಕೊಂಡು, ಮುಂದಿನ ದಿನಗಳಲ್ಲಿ ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಪೋಷಕರು ಮತ್ತು ಶಿಕ್ಷಕ ವೃಂದ ಒಟ್ಟಾಗಿ ಕೆಲಸ ಕಾರ್ಯಗಳನ್ನು ನಿರ್ವಹಿಸಿದಾಗ ಶಾಲೆಯ ಮಕ್ಕಳ ದಾಖಲಾತಿ ಹೆಚ್ಚಾಗುವ ಸಾಧ್ಯತೆಗಳಿದೆ ಎಂದು ಪೋಷಕರ ಸಭೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಲಾಯಿತು. ಪೋಷಕರ ಸಭೆಯಲ್ಲಿ ಶಾಲೆಯ ಎಲ್ಲಾ ಶಿಕ್ಷಕರು ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

LEAVE A REPLY

Please enter your comment!
Please enter your name here