Site icon Suddi Belthangady

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಆಚರಣೆ ನಡೆಯಿತು.

ಈ ಸಮಾರಂಭದಲ್ಲಿ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಇವರು ಭಾಗವಹಿಸಿ ಹಿತವಚನಗಳೊಂದಿಗೆ ಸಂಸ್ಥೆಗೆ ಶುಭ ಹಾರೈಸಿದರು.

ಸಂಸ್ಥೆಯ ಆಡಳಿತ ನಿರ್ದೇಶಕ ಅವಿನಾಶ್ ರಾವ್ ಸಂಸ್ಥೆಯ ಅಭಿವೃದ್ಧಿ ಮುಂದಕ್ಕೆ ನಡೆಯುವಂತಹ ಕಾರ್ಯಕ್ರಮಗಳು, ಮುಂದಿನ ದಿನಗಳಲ್ಲಿ ಆಗುವಂತಹ ಬೆಳವಣಿಗೆಗಳು ಮತ್ತು ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಸಾಫ್ಟ್ವೇರ್ ಕಂಪೆನಿಯನ್ನು ಪ್ರಾರಂಭಿಸುವ ಇಚ್ಚೆಯನ್ನು ವ್ಯಕ್ತಪಡಿಸಿ ಅಧ್ಯಕ್ಷೀಯ ಭಾಷಣವನ್ನು ಮಾಡಿದರು.

ಕಾರ್ಯಕ್ರಮದ ವೇದಿಕೆಯಲ್ಲಿ ಲಲಿತ ರಾವ್ ಉಪಸ್ಥಿತರಿದ್ದರು.ಸಹನಿರ್ದೇಶಕ ಅತಿಶಯ್ ಜೈನ್ ಸ್ವಾಗತಿಸಿ, ಜಗನ್ನಾಥ್ ಧನ್ಯವಾದ ಸಲ್ಲಿಸಿ, ಅಶ್ವತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ವರ್ಗದರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Exit mobile version