ಶ್ರೀ ಧ.ಮಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕ ಸಂಸ್ಥೆಯ ವತಿಯಿಂದ- ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ಪ್ರಶಾಂತ ಶೆಟ್ಟಿ ಅವರಿಗೆ ಅಭಿನಂದನಾ ಕಾರ್ಯಕ್ರಮ

0

ಧರ್ಮಸ್ಥಳ : ಶ್ರೀ ಧ.ಮಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನ ಪರೀಕ ಸಂಸ್ಥೆಯ ವತಿಯಿಂದ ಪ್ರತಿಷ್ಟಿತ ಕರ್ನಾಟಕ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಕಾಲೇಜು ಉಜಿರೆ ಇದರ ಪ್ರಾಂಶುಪಾಲರಾದ ಡಾ ಪ್ರಶಾಂತ ಶೆಟ್ಟಿ ಇವರನ್ನು ಅಭಿನಂದಿಸುವ ಕಾರ್ಯಕ್ರಮವನ್ನು ಕ್ಷೇಮ ಹಾಲ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸಂಸ್ಥೆಯ ಕ್ಷೇಮ ಹಾಲ್ ನಲ್ಲಿ ಜರಗಿದ ಸಮಾರಂಭದಲ್ಲಿ ಉಡುಪಿ ಅಷ್ಟಮಠ ಗಳಲ್ಲೊಂದಾದ ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿಧ್ಯಾವಲ್ಲಭ ತೀರ್ಥ ಶ್ರೀ ಪಾದರು ಡಾ|ಪ್ರಶಾಂತ್ ಶೆಟ್ಟಿ ಯವರನ್ನು ಸೌಖ್ಯವನದ ವತಿಯಿಂದ ಶಾಲು ಹೊದಿಸಿ ಸನ್ಮಾನ ಪತ್ರ, ಮೈಸೂರು ಪೇಟ ಹಾಗೂ ಸ್ಮರಣಿಕೆ ನೀಡಿ ಸನ್ಮಾನಿಸಿದರು.ತಮ್ಮ ಆಶೀರ್ವಚನದಲ್ಲಿ ಶ್ರೀ ಪಾದರು ಡಾ|ಪ್ರಶಾಂತ್ ಶೆಟ್ಟಿಯವರ ಬಗ್ಗೆ ಉತ್ತಮ ಮೆಚ್ಚುಗೆಯ ನುಡಿಗಳನ್ನಾಡಿ ಡಾ|ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಇನ್ನೂ ಹೆಚ್ಚಿನ ಸಾಧನೆ ಮಾಡುವ ಯೋಗ ಮತ್ತು ಸ್ಪೂರ್ತಿ ಬರಲಿ ಎಂದು ಆಶೀರ್ವದಿಸಿದರು.

ಶಾಂತಿವನ ಟ್ರಸ್ಟ್ ಇದರ ಕಾರ್ಯದರ್ಶಿಗಳಾದ ಶ್ರೀ ಬಿ ಸೀತಾರಾಮ ತೋಳ್ಪಡಿತ್ತಾಯ ಇವರು ಉಪಸ್ಥಿತರಿದ್ದು ಸ್ವಾಮೀಜಿಯವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಸಂಸ್ಥೆಯ ವತಿಯಿಂದ ಸನ್ಮಾನಿಸಿ ಗೌರವಿಸಿದರು.ಧರ್ಮಸ್ಥಳ ಶಾಂತಿವನ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಶಿವಪ್ರಸಾದ್ ಶೆಟ್ಟಿ , ಪರೀಕ ಸೌಖ್ಯವನದ ಮುಖ್ಯ ವೈದ್ಯಾಧಿಕಾರಿ ಡಾ.ಗೋಪಾಲ ಪೂಜಾರಿ , ಡಾ.ದೀಪ ಪ್ರಶಾಂತ್ ಶೆಟ್ಟಿ ಇವರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಡಾ.ಪೂಜಾ ಜಿ ಇವರು ಸನ್ಮಾನ ಪತ್ರವನ್ನು ವಾಚಿಸಿದರು. ಸಂಸ್ಥೆಯ ವ್ಯವಸ್ಥಾಪಕ ಪ್ರವೀಣ್ ಕುಮಾರ್ ರವರು ಪ್ರಸ್ಥಾವಿಕ ಮಾತುಗಳೊಂದಿಗೆ ಅತಿಥಿ ಅಭ್ಯಾಗತರನ್ನು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರೂಪಣೆ ಮಾಡಿದರು. ಡಾ ಶೋಭಿತ್ ಶೆಟ್ಟಿ ಇವರು ವಂದನಾರ್ಪಣೆಗೈದು ಕೊನೆಯಲ್ಲಿ ಸ್ವಸ್ತೀ ಮಂತ್ರ ವಾಚಿಸಿದರು.

LEAVE A REPLY

Please enter your comment!
Please enter your name here