ಕುದ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

0

ಕುದ್ಯಾಡಿ: ಕುದ್ಯಾಡಿ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನಡೆಯಿತು.ಅಂಗನವಾಡಿ ಕೇಂದ್ರದ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.ಬಳಿಕ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು.

ಅಂಗನವಾಡಿ ಕೇಂದ್ರದ ವಿದ್ಯಾರ್ಥಿ ರಿಷಿಕ್ ಹುಟ್ಟು ಹಬ್ಬದ ಪ್ರಯುಕ್ತ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಪುಸ್ತಕ ಹಾಗೂ ಪೆನ್ಸಿಲ್ ಕಿಟ್ ನೀಡಿದರು.

ಮಕ್ಕಳ ಪೋಷಕರು ಹಾಜರಿದ್ದರು.ಅಂಗನವಾಡಿ ಕಾರ್ಯಕರ್ತೆ ಈ ಬಾರಿಯ ಪೊಷಣ ಅಭಿಯಾನದ ತಾಲೂಕಿನ ಉತ್ತಮ ಅಂಗನವಾಡಿ ಕಾರ್ಯಕರ್ತೆ ಎಂಬ ಪ್ರಶಸ್ತಿ ಗಳಿಸಿದ ಜಯಲಕ್ಷ್ಮೀ ನಾರಾಯಣ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.ಅಂಗನವಾಡಿ ಸಹಾಯಕಿ ಮೀನಾಕ್ಷಿ ಸಹಕರಿಸಿದರು.

LEAVE A REPLY

Please enter your comment!
Please enter your name here