Site icon Suddi Belthangady

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಪರೋಪಕಾರ ಸಪ್ತಾಹ

ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಮಕ್ಕಳಲ್ಲಿ ಪರೋಪಕಾರ ಮಾಡುವ, ಇನ್ನೊಬ್ಬರ ಕಷ್ಟಕ್ಕೆ ಸ್ಪಂದಿಸುವ ಮನೋಭಾವ ಮೂಡಿದರೆ ಮುಂದಕ್ಕೆ ಅವರ ಜೀವನದಲ್ಲಿ ಸಾರ್ಥಕತೆಯನ್ನು ಪಡೆಯಲು ಖಂಡಿತ ಸಾಧ್ಯವೆಂದು ಶಾಲಾ ಸಂಚಾಲಕರಾದ ವಂ.ಫಾ.ಜೇಮ್ಸ್ ಡಿಸೋಜ ರವರು ಹೇಳಿದರು.

ಅವರು ಶಾಲೆಯಲ್ಲಿ ನಡೆದ ಪರೋಪಕಾರ ಸಪ್ತಾಹದ ಮೂಲಕ ಮಕ್ಕಳಿಂದ ಸಂಗ್ರಹಿಸಿದ ವಿವಿಧ ಜನೋಪಯೋಗಿ ವಸ್ತುಗಳ ವಿತರಣೆಗೆ ಹಸಿರು ನಿಶಾನೆಯನ್ನು ತೋರಿಸಿ ಸಂಗ್ರಹಿಸಿದ ವಸ್ತುಗಳನ್ನು ಅನಾಥಶ್ರಮದ ಸೇವಾ ಸಂಸ್ಥೆಗಳಿಗೆ ಹಸ್ತಾಂತರಿಸುವ ಕಾರ್ಯಕ್ಕೆ ಚಾಲನೆಯನ್ನು ನೀಡಿದರು.

ಶಾಲಾ ಪ್ರಾಂಶುಪಾಲ ವಂ.ಫಾ.ವಿಜಯ್ ಲೋಬೊರವರ ಕಲ್ಪನೆಯಂತೆ, ಪಾಲಕ ಪೋಷಕರ ಸಹಕಾರದೊಂದಿಗೆ ಅನಾಥರಿಗೆ ಬಡ ಕುಟುಂಬಗಳಿಗೆ ಸಹಾಯ ಹಸ್ತವನ್ನು ನೀಡಲು ತಾವು ತಂದಿರುವ ಅಕ್ಕಿ, ಹೆಸರು, ಬೇಳೆ ಕಾಳುಗಳು, ಸಕ್ಕರೆ, ಚಾ ಹುಡಿ, ಮೆಣಸು, ಬೆಳ್ಳುಳ್ಳಿ, ಸಾಬೂನು, ಪೇಸ್ಟ್ ಇತ್ಯಾದಿ ವಸ್ತುಗಳನ್ನು ಸಂಗ್ರಹಿಸಿ ಸಂಬಂಧಿಸಿದವರಿಗೆ ವಿತರುಸಲು ವ್ಯವಸ್ಥೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಮಾಲಕ ಮೋಹನ್ ಕುಮಾರ್, ಪ್ರಾಂಶುಪಾಲರಾದ ವಂ.ಫಾ.ವಿಜಯ್ ಲೋಬೊ ಪಾಲನಾ ಮಂಡಳಿ ಉಪಾಧ್ಯಕ್ಷ ಆಂಟನಿ ಫೆರ್ನಾಂಡಿಸ್, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷ ಡಾ.ಪ್ರಶಾಂತ್ ಕುಮಾರ್ ಸ್ಥಳೀಯ ಪಂಚಾಯತ್ ಸದಸ್ಯ ಅನಿಲ್ ಕುಮಾರ್ ಹಾಗೂ ಜಾನೆಟ್ ರೋಡ್ರಿಗಸ್ ರವರು ಉಪಸ್ಥಿತರಿದ್ದರು.

ಪ್ರಭಾಕರ ಶೆಟ್ಟಿಯವರು ನಿರೂಪಿಸಿ ವಂದಿಸಿದರು.

Exit mobile version