ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

0

ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ 18 ಜನ ಪಕ್ಷದ ಪ್ರಮುಖರನ್ನು ಎಐಸಿಸಿಯಿಂದ ನೇಮಿಸಲಾಗಿದೆ.

ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಜವಾಬ್ದಾರಿ ನಿರ್ವಹಿಸಲಿರುವ ಇವರು ಚುನಾವಣಾ ಕಾರ್ಯತಂತ್ರ, ಪ್ರಚಾರ, ಸಭೆಗಳ ಮತ್ತಿತರ ಚಟುವಟಿಕೆಗಳ ಬಗ್ಗೆ ಗಮನ, ಪಕ್ಷದ ಗೆಲುವಿಗೆ ಪೂರಕವಾಗಿ ಕ್ಷೇತ್ರಾವಾರು ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ವರದಿ ಸಂಗ್ರಹಿಸಿ ಎಐಸಿಸಿಗೆ ಮಾಹಿತಿ ಒಪ್ಪಿಸುವುದು ಜವಾಬ್ದಾರಿಯಾಗಿದೆ.

LEAVE A REPLY

Please enter your comment!
Please enter your name here