Site icon Suddi Belthangady

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಕಳಿಯ: ಕಳಿಯ ಗ್ರಾಮದ ಎರುಕಡಪ್ಪು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ನ.16ರಂದು ನಡೆಯಿತು.

ಅಂಗನವಾಡಿ ಕೇಂದ್ರದ ಪುಟಾಣಿ ಸಾತ್ವಿಕ್, ದೀಪಶ್ರೀ ನಿಕೇತನ್, ರಿದಾಫಾತಿಮ, ಶಾವನ್ ದೀಪ ಪ್ರಜ್ವಲಣೆ ಮಾಡಿದರು.ಬಾಲವಿಕಾಸ ಸಮಿತಿ ಅಧ್ಯಕ್ಷೆ ನೀತಾ ಸತೀಶ್ ಅಧ್ಯಕ್ಷತೆ ವಹಿಸಿದ್ದರು.

ಕಳಿಯ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ, ಪ್ರಸ್ತುತ ಸದಸ್ಯ, ಆಶಾ ಕಾರ್ಯಕರ್ತೆ ಸುಭಾಷಿಣಿ ಜನಾರ್ದನ ಗೌಡ ವೇದಿಕೆಯಲ್ಲಿ ಉಪಸ್ಥಿತರಿದ್ದು ಮಾತನಾಡುತ್ತಾ ಜವಹರಲಾಲ್ ನೆಹರೂ ಜನ್ಮದಿನವನ್ನು ಮಕ್ಕಳ ದಿನಾಚರಣೆಯಾಗಿ ದೇಶದಲ್ಲಿ ಆಚರಿಸುವ ಮೂಲಕ ಮಕ್ಕಳ ಭವಿಷ್ಯದಲ್ಲಿ ಭಾರತದ ಉತ್ತಮ ಪ್ರಜೆಗಳಾಗಿ ಜವಾಹರಲಾಲ್ ನೆಹರೂ ಅವರಂತೆಯೇ ನಮ್ಮ ಅಂಗನವಾಡಿ ಮಕ್ಕಳು ಹೆಸರು ಗಳಿಸುವಂತಾಗಲಿ ಎಂದು ಹೇಳಿದರು.

ಬಾಲ ವಿಕಾಸ ಸಮಿತಿ ಸದಸ್ಯರಾದ ಅನಿತಾ ದಯಾನಂದ ಗೌಡ, ಹಿರಿಯರಾದ ನೇಬಿಸಾ ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು.

ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆ ಏರ್ಪಡಿಸಲಾಗಿತ್ತು. ವಿಜೇತರಾದ ಮಕ್ಕಳಿಗೆ ಸ್ಥಳೀಯರಾದ ಧನಶ್ರೀ ಹರಿಪ್ರಸಾದ್ ಹಾಗೂ ಇರ್ಫಾನ್ ಬಹುಮಾನ ಕೊಡುಗೆ ನೀಡಿ ಸಹಕರಿಸಿದರು.

ಈ ಸಂದರ್ಭದಲ್ಲಿ ಬಾಲ ವಿಕಾಸ ಸಮಿತಿ ಸದಸ್ಯರು, ಮಕ್ಕಳ ಪೋಷಕರು,ಸಹಾಯಕಿ ಗೀತಾ ಮತ್ತು ವಿಧ್ಯಾಭಿಮಾನಿಗಳು ಭಾಗವಹಿಸಿದ್ದರು. ಅಂಗನವಾಡಿ ಕಾರ್ಯಕರ್ತೆ ಗುಣವತಿ ಕೆ.ಎನ್.ಸ್ವಾಗತಿಸಿ, ಧನ್ಯವಾದವಿತ್ತರು.

Exit mobile version