ಇಳಂತಿಲ: ಮರದಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

0

ಬೆಳ್ತಂಗಡಿ: 24 ದಿನದ ಹಿಂದೆ ಮರದಿಂದ ಬಿದ್ದು ಗಂಭೀರ ಗಾಯಗೊಂಡು ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಬೆಳ್ತಂಗಡಿ ತಾಲೂಕು ಇಳಂತಿಲ ಗ್ರಾಮದ ಪಾಡೆಂಕಿ ನಿವಾಸಿ ನಾರಾಯಣ ಪೂಜಾರಿ(54ವ.)ರವರು ಚಿಕಿತ್ಸೆಗೆ ಸ್ಪಂದಿಸದೆ ನ.16ರಂದು ಮಧ್ಯಾಹ್ನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೃಷಿಕರಾದ ನಾರಾಯಣ ಪೂಜಾರಿಯವರು ಅ.24ರಂದು ಕೆಲಸದಾಳುಗಳಾದ ಚಿನ್ನಯ್ಯ ಮತ್ತು ಬಾಳಪ್ಪ ಎಂಬವರೊಂದಿಗೆ ತಮ್ಮ ತೋಟಕ್ಕೆ ಸೊಪ್ಪು ಕಡಿಯಲೆಂದು ಹೋಗಿದ್ದು, ಮಧ್ಯಾಹ್ನ ಮರ ಏರಿ ಸೊಪ್ಪು ಕಡಿಯುತ್ತಿರುವಾಗ ಆಕಸ್ಮಿಕವಾಗಿ ಕೈ ಜಾರಿ ‘ ಮರದಿಂದ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದರು.

ಮನೆಯವರು ಗಾಯಾಳುವನ್ನು ಉಪಚರಿಸಿ ಆಟೋ ರಿಕ್ಷಾದಲ್ಲಿ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಕೆಎಂಸಿ ಆಸ್ಪತ್ರೆಗೆ ದಾಖಲಿಸಿದ್ದರು.ಅಲ್ಲಿ ಚಿಕಿತ್ಸೆಯಲ್ಲಿದ್ದ ನಾರಾಯಣ ಪೂಜಾರಿಯವರು ಚಿಕಿತ್ಸೆಗೆ ಸ್ಪಂದಿಸದೇ ನ.16ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಮೃತರ ಪುತ್ರಿ ನಿಶ್ಚಿತಾ ಅವರು ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 174 ಸಿಆರ್‌ಪಿಸಿಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here