Site icon Suddi Belthangady

ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ನಲ್ಲಿ ಯಾಂತ್ರಿಕ ಕಾರ್ಯಾಗಾರ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ನ.21ರಂದು ಯಾಂತ್ರಿಕ ಕಾರ್ಯಾಗಾರ ಆಟೋ ಎಕ್ಸ್ಪೋ ನಡೆಯಿತು.

ಬೆಳ್ತಂಗಡಿಯ ನ್ಯಾಯವಾದಿ ಶ್ರೀಕೃಷ್ಣ ಶೆಣೈ ಉದ್ಘಾಟಿಸಿ ಶುಭ ಹಾರೈಸಿದರು.

ವೇಣೂರು ಎಸ್.ಡಿ.ಎಂ ಐಟಿಐ ಕಾಲೇಜು ಪ್ರಾಂಶುಪಾಲ ವಿಶ್ವೇಶ್ವರ ಪ್ರಸಾದ್ ಕೆ.ಆರ್., ಶ್ರೀ ಧ.ಮ.ಶಿಕ್ಷಣ ಸಂಸ್ಥೆಗಳ ಕ್ಷೇಮಪಾಲನಾ ಅಧಿಕಾರಿ ಸೋಮಶೇಖರ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಪಾಲಿಟೆಕ್ನಿಕ್ ಕಾಲೇಜು ಪ್ರಾಂಶುಪಾಲ ಸಂತೋಷ ಅಧ್ಯಕ್ಷತೆ ವಹಿಸಿದ್ದರು.ಉಪನ್ಯಾಸಕರು, ವಿದ್ಯಾರ್ಥಿಗಳು, ಹಾಜರಿದ್ದರು.ಮೆಕಾನಿಕಲ್ ಇಂಜಿನಿಯರ್ ವಿಭಾಗದ ಸಂಚಾಲಕ ಶಿವರಾಜ್ ಪಿ.ಸ್ವಾಗತಿಸಿ, ಉಪನ್ಯಾಸಕ ಪದ್ಮರಾಜ್ ನಿರೂಪಿಸಿದರು.ಬಳಿಕ ವಿದ್ಯಾರ್ಥಿಗಳಿಂದ ಯಾಂತ್ರಿಕ ಕಾರ್ಯಾಗಾರ, ಪ್ರದರ್ಶನ ನಡೆಯಿತು.

Exit mobile version