ಲಾಯಿಲ: ಕಾರು ಡಿಕ್ಕಿ-ದ್ವಿಚಕ್ರ ವಾಹನ ಸವಾರನಿಗೆ ಗಾಯ

0

ಬೆಳ್ತಂಗಡಿ: ಲಾಯಿಲ ಗ್ರಾಮದ ಸೈಂಟ್ ಮೇರಿಸ್ ಶಾಲೆಯ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕುರಿತು ಪ್ರಕರಣ ದಾಖಲಾಗಿದೆ.

ಕೊಯ್ಯೂರು ಗ್ರಾಮದ ಪೂವಪ್ಪ (40 ವ) ಎಂಬವರು ನ.19ರಂದು ಮಧ್ಯಾಹ್ನ ದ್ವಿ ಚಕ್ರ ವಾಹನ ಚಲಾಯಿಸುತ್ತಾ ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮದ ಸೈಂಟ್ ಮೇರಿಸ್ ಶಾಲೆಯ ಬಳಿ ತಲುಪುತ್ತಿದ್ದಂತೆಯೇ ಹಿಂದಿನಿಂದ ಕಾರನ್ನು ಅದರ ಚಾಲಕ ದುಡುಕುತನದಿಂದ ಚಲಾಯಿಸಿದ ಪರಿಣಾಮ ಕಾರಿನ ಎಡಬದಿಯ ಸೈಡ್ ಮಿರರ್ ದ್ವಿ ಚಕ್ರ ವಾಹನದ ಬಲಬದಿಯ ಸೈಡ್ ಮಿರರ್‌ಗೆ ಡಿಕ್ಕಿ ಹೊಡೆದಿದೆ.

ಪರಿಣಾಮ ಪೂವಪ್ಪರವರು ದ್ವಿಚಕ್ರ ವಾಹನ ಸಮೇತ ರಸ್ತೆಗೆ ಬಿದ್ದು ಗಾಯಗೊಂಡಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here